ಮಹಮದ್ ಅನ್ವರ್ ಹತ್ಯೆ ಪ್ರಕರಣದ ಬಗ್ಗೆ ನಿಸ್ಪಕ್ಷಪಾತ ತನಿಖೆ

ಚಿಕ್ಕಮಗಳೂರು ಜೂ.25- ಬಿಜೆಪಿ ನಗರ ಕಾರ್ಯದರ್ಶಿ ಮಹಮದ್ ಅನ್ವರ್ ಹತ್ಯೆ ಪ್ರಕರಣದ ಬಗ್ಗೆ ನಿಸ್ಪಕ್ಷಪಾತ ತನಿಖೆ ನಡೆಸಬೇಕು, ಆರೋಪಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಉಪಾದ್ಯಕ್ಷ ಹೆಚ್.ಹೆಚ್.ದೇವರಾಜ್ ಒತ್ತಾಯಿಸಿದ್ದಾರೆ. ಜಾತ್ಯಾತೀತ ಮನೋಭಾವವನ್ನು ಹೊಂದಿದ್ದ ಅನ್ವರ್ ಅವರ ಹತ್ಯೆ ಖಂಡನೀಯ ಎಂದು ಹೇಳಿಕೆಯಲ್ಲಿ ತಿಳಿಸಿರುವ ಅವರು ಇದು ಅತ್ಯಂತ ಸೂಕ್ಷ್ಮ ವಿಷಯವಾಗಿರುವುದರಿಂದ ಗಣ್ಯರು ಹೇಳಿಕೆ ನೀಡುವ ಸಂದರ್ಭದಲ್ಲಿ ಜವಾಬ್ದಾರಿಯಿಂದ ಮಾತನಾಡಬೇಕು ಎಂದಿದ್ದಾರೆ. ಶಾಂತಿಗೆ ಹೆಸರಾದ ಮಲೆನಾಡಿನಲ್ಲಿ ಇಂತಹ ಪ್ರಕರಣ ನಡೆದಿರುವುದು ದುರಾದೃಷ್ಟಕರ ಎಂದಿರುವ ಅವರು ಪೆÇಲೀಸ್ ಇಲಾಖೆ ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಇಂತಹ ಪ್ರಕರಣಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ನಗರದ ಜನತೆ ಸುಳ್ಳು ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ