ಶಿಕ್ಷಣ ವ್ಯವಸ್ಥೆ ಬಗ್ಗೆ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಹೇಳಿದ್ದೇನು, ಅಚ್ಚರಿ ಮೂಡಿಸಿದ ಆ ಟ್ವೀಟ್ ನಲ್ಲಿ ಅಂತದ್ದೇನಿದೆ?

ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನ ಪ್ರಭಾ ಅವರು ಅಚ್ಚರಿಯ ಟ್ವೀಟ್ ಮಾಡಿದ್ದಾರೆ.

ಶಿಕ್ಷಣ ವ್ಯವಸ್ಥೆಯಲ್ಲಿ ಮಾಫಿಯಾ ಬಗ್ಗೆ ಟ್ವೀಟ್‍ನಲ್ಲಿ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಅವರು, ಶಿಕ್ಷಣ ವ್ಯವಸ್ಥೆಯ ಮಾಫಿಯಾ ಹೆಚ್ಚಾಗಲು ಅಧಿಕಾರಿಗಳೇ ಕಾರಣ. ಲೋಪದೋಷಗಳನ್ನು ಸರಿಪಡಿಸುವಲ್ಲಿ ಸರಿಯಾದ ಸಮಯದಲ್ಲಿ ಅಧಿಕಾರಿಗಳು ಕೆಲಸ ಮಾಡಲ್ಲ. ಇದ್ರಿಂದಲೇ ಶಿಕ್ಷಣ ಕ್ಷೇತ್ರದಲ್ಲಿ ಮಾಫಿಯಾ ಹೆಚ್ಚಾಗಿದೆ ಅಂತಾ ತಿಳಿಸಿದ್ದಾರೆ.

ಮುಖ್ಯ ಕಾರ್ಯದರ್ಶಿಯವರ ಬಹಿರಂಗ ಟ್ವೀಟ್ ಇದೀಗ ಅಚ್ಚರಿ ಮೂಡಿಸಿದೆ. ಉನ್ನತ ಹುದ್ದೆಯಲ್ಲಿದ್ದವರೇ ಹೀಗೆ ಅಸಹಾಯಕರಾದ್ರೇ ಹೇಗೆ ಎಂಬ ಪ್ರಶ್ನೆಯೊಂದು ಮೂಡಿಬಂದಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ