ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ- ದೇವೇಗೌಡ

ಉತ್ತರಕನ್ನಡ,ಜೂ.25- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಜು.5ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ಮಂಡಿಸಲಿದ್ದಾರೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರು ಹೇಳಿದರು. ಇಡಗುಂಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, , ಎರಡು ಪಕ್ಷದವರು ಒಗ್ಗೂಡಿ ಸರ್ಕಾರ ನಡೆಸುತ್ತಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಜನತೆಗೆ ನೀಡಿದ ಭರವಸೆಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಈಡೇರಿಸಲಿದ್ದಾರೆ ಎಂದರು. ಬಜೆಟ್ ಮಂಡನೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ನಿಗದಿಯಂತೆ ಜು.5ರಂದು ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಮಾಡುವರು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ