ಅಲಿಘರ್ ಮುಸ್ಲಿಂ ವಿವಿಯಲ್ಲಿ ದಲಿತರಿಗೆ ಮೀಸಲಾತಿ ಕೊಡಿ: ಸಿಎಂ ಯೋಗಿ ಅದಿತ್ಯನಾಥ್

ಕನೌಜ್: ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಹಾಗೂ ಜಾಮಿಯಿ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯಗಳಲ್ಲಿ ದಲಿತರಿಗೂ ಮೀಸಲು ವ್ಯವಸ್ಥೆ ಕಲ್ಪಿಸಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

ಉತ್ತರ ಪ್ರದೇಶದ ಮಾಜಿ ಸಚಿವ ರಾಮಪ್ರಕಾಶ್ ತ್ರಿಪಾಠಿ ಅವರ 10ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಶನಿವಾರ ಕನೌಜ್ ಗೆ ಆಗಮಿಸಿದ್ದರು.

ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಅವರು ಎರಡೂ ವಿಶ್ವವಿದ್ಯಾಲಯಗಳಲ್ಲಿ ದಲಿತರಿಗೆ ಮೀಸಲಾತಿ ಕಲ್ಪಿಸುವ ಕುರಿತಂತೆ ದಲಿತಪರ ಸಂಘಟನೆಗಳು ಧ್ವನಿ ಎತ್ತಬೇಕು ಎಂದು ಮನವಿ ಮಾಡಿದರು.

ದಲಿತರನ್ನು ಕಡೆಗಣಿಸಲಾಗುತ್ತಿದೆ ಎಂದು ಹೇಳುತ್ತಿರುವವರು ಈ ವಿಶ್ವವಿದ್ಯಾಲಯಗಳಲ್ಲಿಯೂ ಮೀಸಲು ವ್ಯವಸ್ಥೆ ಬೇಕು ಎಂದು ಯಾವಾಗ ಧ್ವನಿ ಎತ್ತುತ್ತಾರೆ ಎಂದು ಅವರು ಪ್ರಶ್ನಿಸಿದರು.

 

 

 

 

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ