ಅಪಘಾತದಲ್ಲಿ ದ್ವಿಚಕ್ರವಾಹನ ಸವಾರ ಮೃತ

ಚನ್ನಪಟ್ಟಣ, ಜೂ.26- ರಸ್ತೆದಾಟಲು ನಿಂತಿದ್ದ ದ್ವಿಚಕ್ರವಾಹನಕ್ಕೆ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರವಾಹನ ಸವಾರ ಮೃತಪಟ್ಟು ಹಿಂಬದಿ ಸವಾರ ಹಾಗೂ ಮತ್ತೊಬ್ಬ ಗಂಭೀರಗಾಯವಾಗಿರುವ ಘಟನೆ ಮೈಸೂರು ಹೆದ್ದಾರಿಯ ಮುದಗೆರೆ ಗೇಟ್ ಬಳಿ ನಡೆದಿದೆ.
ಬೆಂಗಳೂರಿನ ಕನಕಪುರ ರಸ್ತೆಯ ತಾತಗುಣಿ ಗ್ರಾಮದ ಮಂಜುನಾಥ್ (32) ಮೃತದುರ್ದೈವಿ.
ಈತ ಸಂಪೂರ್ಣ ಇಂಜಿನಿಯರಿಂಗ್ ಕಾಲೇಜಿನಲ್ಲಿ ಫೈಂಟ್ ಮಾಡುವ ಕೆಲಸ ಮಾಡುತ್ತಿದ್ದು ಸಹಪಾಠಿಗಳಿಗೆ ಊಟ ತೆಗೆದುಕೊಂಡು ಹೋಗಲು ಸ್ನೇಹಿತನ ಜೊತೆ ಬಂದಿದ್ದಾಗ ಈ ಘಟನೆ ಸಂಭವಿಸಿದೆ.
ಊಟ ಮುಗಿಸಿಕೊಂಡು ದ್ವಿಚಕ್ರವಾಹನದಲ್ಲಿ ಸ್ನೇಹಿತ ಶಿವರಾಮು ಎಂಬಾತನ ಜೊತೆ ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದಾಗ ಮೈಸೂರು ಕಡೆಯಿಂದ ಅತಿವೇಗವಾಗಿ ಬಂದ ಇನೋವಾ ಕಾರು ಡಿಕ್ಕಿ ಹೊಡೆದಿದೆ.
ಕಾರು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರವಾಹನ ಚಾಲನೆ ಮಾಡುತ್ತಿದ್ದ ಮಂಜುನಾಥ್ ಸ್ಥಳದಲ್ಲೇ ಬಿದ್ದು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರ ಶಿವರಾಮು ಕಾಲು ಮುರಿದರೆ ಪಕ್ಕದಲ್ಲೇ ಇದ್ದ ಇದ್ದ ಸಂಪೂರ್ಣ ಇಂಜಿನಿಯರಿಂಗ್ ಕಾಲೇಜಿನ ಇನ್‍ಸ್ಪ್ರಟರ್ ಚೇತು ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಪ್ರಕರಣದ ಬಗ್ಗೆ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ