ಶಾಂತಿವನದಿಂದ ಹೊರಟ ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ಭೇಟಿ, ಮಂಜುನಾಥನ ದರ್ಶನ

ಮಂಗಳೂರು: ಶಾಂತಿವನದಿಂದ ಹೊರಡಲು ಸಜ್ಜಾಗುತ್ತಿರುವ ಮಾಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆ ಕ್ಷಣದಲ್ಲಿ ಅಭಿಮಾನಿಗಳೊಂದಿಗೆ ಸೆಲ್ಫಿಗೆ ಪೋಸ್‌ ನೀಡಿದರು. ಅದಾದ ಬಳಿಕ ಅವರು ಧರ್ಮಸ್ಥಳದತ್ತ ಕಾರಿನಲ್ಲಿ ಪ್ರಯಾಣಿಸಿದರು.
ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಸಿದ್ದರಾಮಯ್ಯ ಅವರು ವಿಶ್ರಾಂತಿಗಾಗಿ ಸನ್ನಿಧಿ ಅತಿಥಿಗೃಹಕ್ಕೆ ತೆರಳಿದರು.
ಇದಕ್ಕೂ ಮೊದಲು ಬೆಳಗ್ಗೆಯೇ ಬೆಂಗಳೂರು ಚಾಮರಾಜಪೇಟೆ ಕಾಂಗ್ರೆಸ್ ಉಪಾಧ್ಯಕ್ಷೆ ಕಮಲ ಸಿ. ಅವರು ಶಾಂತಿವನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಕಮಲ , ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಿಸುವಂತೆ ಕೇಳಿಕೊಂಡಿದ್ದೇನೆ . ಬೆಳಗ್ಗೆ ಆರು ಗಂಟೆಗೆ ಬಂದು ಕಾಯುತ್ತಿದ್ದೆ, ಅಣ್ಣನ ಭೇಟಿಗೆ ಅವಕಾಶ ಸಿಕ್ಕಿತು ಎಂದು ಹೇಳಿದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ