ಅಪಘಾತದಲ್ಲಿ ವಿದ್ಯಾರ್ಥಿನಿಯರ ಸಾವು

ಹಾಸನ, ಜೂ.29-ಕಾಲೇಜಿಗೆ ಬಂಕ್ ಹೊಡೆದು ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ಜೇನುಕಲ್ ಸಿದ್ದೇಶ್ವರ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿಯರಿಬ್ಬರಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲೂಕಿನ ಜಾವಗಲ್ ಬಳಿ ನಡೆದಿದೆ. ಅರಕಲಗೂಡು ತಾಲೂಕಿನ ಹಂಡ್ರಂಗಿ ಹಾಗೂ ಅಕಲವಾಡಿ ಗ್ರಾಮದ ಆಶಾ (17), ಸೌಮ್ಯ (17) ಮೃತಪಟ್ಟ ವಿದ್ಯಾರ್ಥಿನಿಯರು. ಹೊಳೆನರಸೀಪುರದ ಪಡುವಲ ಹಿಪ್ಪೆ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಈ ವಿದ್ಯಾರ್ಥಿನಿಯರು, ಅದೇ ಕಾಲೇಜಿನ ಸಂತೋಷ್‍ನ ಎಂಬಾತನ ಜೊತೆ ಬೈಕ್‍ನಲ್ಲಿ ಜೇನುಕಲ್ ಸಿದ್ದೇಶ್ವರ ಬೆಟ್ಟಕ್ಕೆ ತೆರಳಿ ಹಾಸನಕ್ಕೆ ವಾಪಸ್ಸಾಗುವಾಗ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಬೈಕ್‍ಗೆ ಡಿಕ್ಕಿಯಾದ ಪರಿಣಾಮ ಆಶಾ ಮತ್ತು ಸೌಮ್ಯ ಸ್ಥಳದಲ್ಲೇ ಸಾವನ್ನಪ್ಪಿದರೆ, ಸಂತೋಷ್‍ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಜಾವಗಲ್ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ