ಎಚ್.ಸಿ.ಮಹದೇವಪ್ಪನವರು ಕೋಮುವಾದಿ ಪಕ್ಷ ಬಿಜೆಪಿಗೆ ಸೇರುವುದಿಲ್ಲ – ಸಂಸದ ಆರ್.ಧೃವನಾರಾಯಣ್

ಮೈಸೂರು, ಜೂ.29- ಮಾಜಿ ಸಚಿವ ಎಚ್.ಸಿ.ಮಹದೇವಪ್ಪನವರು ಯಾವುದೇ ಕಾರಣಕ್ಕೂ ಕೋಮುವಾದಿ ಪಕ್ಷ ಬಿಜೆಪಿಗೆ ಸೇರುವುದಿಲ್ಲ ಎಂದು ಸಂಸದ ಆರ್.ಧೃವನಾರಾಯಣ್ ಹೇಳಿದ್ದಾರೆ. ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದೇವಪ್ಪನವರು ಜಾತ್ಯತೀತತೆ ಹಿನ್ನಲೆಯುಳ್ಳ ವ್ಯಕ್ತಿ. ಹಾಗಾಗಿ ಅವರು ಬಿಜೆಪಿಯೊಂದಿಗೆ ಸೇರುವುದಿಲ್ಲ ಎಂದು ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಆಡಳಿತ ನಡೆಸುತ್ತಿದೆ. ಅದೇ ರೀತಿ ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲೂ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಆಡಳಿತ ಜಾರಿಗೆ ತರಲು ನಿರ್ಧರಿಸಿದ್ದೇವೆ ಎಂದು ಹೇಳಿದರು.
ಈಗ ಜಿಪಂನಲ್ಲಿ ಜೆಡಿಎಸ್-ಬಿಜೆಪಿ ಆಡಳಿತ ನಡೆಸುತ್ತಿವೆ. ಈಗಾಗಲೇ ಪ್ರವಾಸೋದ್ಯಮ ಸಚಿವ ಜೆಡಿಎಸ್‍ನ ಸಾ.ರಾ.ಮಹೇಶ್ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ. ಮೈಸೂರು ಜಿಪಂನಲ್ಲೂ ಕಾಂಗ್ರೆಸ್-ಜೆಡಿಎಸ್ ಆಡಳಿತ ಬರಬೇಕೆಂದು ಮನವಿ ಮಾಡಿದ್ದೇನೆ. ಇದಕ್ಕೆ ಅವರು ಸ್ಪಂದಿಸಿದ್ದು, ತಮ್ಮ ವರಿಷ್ಠರೊಂದಿಗೆ ಈ ಕುರಿತು ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರೆಂದು ಧೃವನಾರಾಯಣ್ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ