ನಶೆಯಲ್ಲಿ ಉಪನ್ಯಾಸಕ!

ಮೈಸೂರು, ಜೂ.29- ಕುಡಿತದ ಅಮಲಿನಲ್ಲಿ ಉಪನ್ಯಾಸಕರೊಬ್ಬರು ಮೊಬೈಲ್ ಟವರ್ ಏರಿ ಕುಳಿತಿದ್ದ ಪ್ರಸಂಗ ನಡೆದಿದೆ. ಹಿನಕಲ್ ನಿವಾಸಿ ರಮೇಶ್‍ಕುಮಾರ್ (40) ಎಂಬುವರು ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮನನೊಂದಿದ್ದ ಇವರು, ಕುಡಿದು ಹಿನಕಲ್ ಬಳಿ ಇರುವ ಮೊಬೈಲ್ ಟವರ್ ಏರಿ ಕುಳಿತಿದ್ದರು. ಇದನ್ನು ಕಂಡ ಸ್ಥಳೀಯರು ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಪೆÇಲೀಸರು ಆತನನ್ನು ಕೆಳಗೆ ಇಳಿಸಲು ಹರಸಾಹಸಪಟ್ಟು, ಅವರಿಗೆ ಬುದ್ಧಿಮಾತು ಹೇಳಿ ಕಳುಹಿಸಿದ್ದಾರೆ. ಈ ಹಿಂದೆಯೂ ಇದೇ ರೀತಿ ಮೊಬೈಲ್ ಟವರ್ ಏರಿ ಕುಳಿತಿದ್ದರು ಎಂದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ