ಪ್ರಣಾಳಿಕೆಯಲ್ಲಿ ಹೇಳಲಾಗಿದ್ದ ಎಲ್ಲ ಅಂಶಗಳು ಜಾರಿಯಾಗಲಿವೆ: ಸಚಿವ ಆರ್.ವಿ.ದೇಶಪಾಂಡೆ

 

ಬೆಂಗಳೂರು, ಜೂ.29-ನಮ್ಮ ಪಕ್ಷದ ಯಾವುದೇ ಕಾರ್ಯಕ್ರಮವು ಬದಲಾಗುವುದಿಲ್ಲ, ಪ್ರಣಾಳಿಕೆಯಲ್ಲಿ ಹೇಳಲಾಗಿದ್ದ ಎಲ್ಲ ಅಂಶಗಳು ಜಾರಿಯಾಗಲಿವೆ. ಇದರ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.
ಕೆಪಿಸಿಸಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಡೆಯಲಿರುವ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಸಮಿತಿ ಸಭೆಯಲ್ಲಿ ಈ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಿ ಒಮ್ಮತಕ್ಕೆ ಬರಲಿದ್ದೇವೆ ಎಂದು ಹೇಳಿದರು.
ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಬದಲಾವಣೆ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದೆಲ್ಲ ಸುಳ್ಳು ನಾನ್‍ಸೆನ್ಸ್ ಎಂದು ಹೇಳಿ ಅಲ್ಲಿಂದ ತೆರಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ