ಮಂಗಮ್ಮನಪಾಳ್ಯ ಕೆರೆ ಬಫರ್ ಜೋನ್‍ನಲ್ಲಿ ಕಟ್ಟಡ ನಿರ್ಮಾಣ: ಸಹಾಯಕ ಅಭಿಯಂತರರ ಅಮಾನತಿಗೆ ಆದೇಶ

 

ಬೆಂಗಳೂರು, ಜೂ.29- ಮಂಗಮ್ಮನಪಾಳ್ಯ ಕೆರೆ ಬಫರ್ ಜೋನ್‍ನಲ್ಲಿ ಕಟ್ಟಡ ನಿರ್ಮಾಣ ಮಾಡಲು ಅನುಮತಿ ನೀಡಿರುವ ಸಹಾಯಕ ಅಭಿಯಂತರರನ್ನು ಕೂಡಲೇ ಅಮಾನತುಗೊಳಿಸುವಂತೆ ಮೇಯರ್ ಸಂಪತ್‍ರಾಜ್ ಇಂದಿಲ್ಲಿ ಆಯುಕ್ತರಿಗೆ ಸೂಚಿಸಿದರು.
ನಿನ್ನೆ ನಡೆದ ಪಾಲಿಕೆ ಸಭೆಯಲ್ಲಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಈ ಸಂಬಂಧ ವಿಷಯ ಪ್ರಸ್ತಾಪಿಸಿ ಕೆರೆ ಬಫರ್ ಜೋನ್‍ನಲ್ಲಿ ಕಟ್ಟಡ ನಿರ್ಮಿಸಲು ಅನುಮತಿ ನೀಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಇಂದು ಮತ್ತೆ ಈ ವಿಷಯ ಪ್ರಸ್ತಾಪಿಸಿ ಮಂಗಮ್ಮನಪಾಳ್ಯ ಕೆರೆ ಬಫರ್ ಜೋನ್‍ನಲ್ಲಿ ಕಟ್ಟಡ ನಿರ್ಮಾಣ ಮಾಡಲು ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್ ಸಂಪತ್‍ರಾಜ್, ಮಂಗಮ್ಮನಪಾಳ್ಯ ಕೆರೆ ಬಫರ್‍ಜೋನ್‍ನಲ್ಲಿ ಕಟ್ಟಡ ಕಟ್ಟಲು ಅನುಮತಿ ನೀಡಿದ ಎಇಯನ್ನು ತಕ್ಷಣ ಅಮಾನತುಪಡಿಸುವಂತೆ ಆಯುಕ್ತರಿಗೆ ಸೂಚಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ