ತಾಯಿ ಹಾಗೂ ಮಗನನ್ನು ಕಟ್ಟಿ ಹಾಕಿ ದರೋಡೆ

ಚಿಕ್ಕಬಳ್ಳಾಪುರ, ಜೂ.29- ಮನೆಗೆ ನುಗ್ಗಿದ ದುಷ್ಕರ್ಮಿಗಳು ತಾಯಿ ಹಾಗೂ ಮಗನನ್ನು ಕಟ್ಟಿ ಹಾಕಿ ದರೋಡೆಗೆ ಯತ್ನಿಸಿರುವ ಘಟನೆ ಬಾಗೇಪಲ್ಲಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಮಾರ್ಗಾನುಕುಂಟೆ ಗ್ರಾಮ ಸುರೇಂದ್ರಬಾಬು ಎಂಬುವರ ಮನೆಗೆ ರಾತ್ರಿ ಇಬ್ಬರು ದುಷ್ಕರ್ಮಿಗಳು ನುಗ್ಗಿ ಸುರೇಂದ್ರಬಾಬು ಮತ್ತು ಆತನ ತಾಯಿಯನ್ನು ಕಟ್ಟಿ ಹಾಕಿ ಮನೆಯಲ್ಲಿದ್ದ ಚಿನ್ನಾಭರಣ ದೋಚಲು ಯತ್ನಿಸಿದ್ದರು. ಈ ವೇಳೆ ತಾಯಿ, ಮಗನ ಕೂಗಾಟದಿಂದ ಬೆಚ್ಚಿದ ದರೋಡೆಕೋರರು ಮನೆಯಲ್ಲಿದ್ದ ಗವಾಕ್ಷಿ ಮೂಲಕ ಹೊರ ಬಂದು ಸಮೀಪದಲ್ಲೇ ನಿಲ್ಲಿಸಿದ್ದ ಕಾರಿನಲ್ಲಿ ಪರಾರಿಯಾಗಿದ್ದಾರೆ. ಇವರ ಚೀರಾಟದಿಂದ ಎಚ್ಚೆತ್ತ ಅಕ್ಕಪಕ್ಕದವರು ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ನಡೆದ ಸ್ಥಳಕ್ಕೆ ಎಸ್‍ಪಿ ಕಾರ್ತಿಕ್‍ರೆಡ್ಡಿ, ಡಿವೈಎಸ್‍ಪಿ ಪ್ರಭುಶಂಕರ್‍ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಬಾಗೇಪಲ್ಲಿ ಪಟ್ಟಣದಲ್ಲಿ ಕಳ್ಳತನ ಹಾಗೂ ದರೋಡೆ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿ ಪೆÇಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ