ತಾಕತ್ತಿದ್ದರೆ ಪ್ರಧಾನಿ ಮೋದಿ, ಅಮಿತ್ ಶಾ ಹೈದ್ರಾಬಾದ್ ನಿಂದ ಸ್ಪರ್ಧಿಸಿ, ಗೆದ್ದು ತೋರಿಸಲಿ: ಒವೈಸಿ ಸವಾಲು

ಹೈದರಾಬಾದ್‌:ಜೂ-30: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಾಕತ್ತಿದ್ದರೆ ಹೈದರಾಬಾದ್ ನಲ್ಲಿ ಸ್ಪರ್ಧಿಸಿ ಗೆದ್ದು ತೋರಿಸಿ ಎಂದು ಎಐಎಂಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಬಹಿರಂಗ ಸವಾಲು ಹಾಕಿದ್ದಾರೆ.

ಹೈದರಾಬಾದ್ ನಲ್ಲಿ ನಡೆದ ಪಕ್ಷದ ರ್ಯಾಲಿಯಲ್ಲಿ ತಮ್ಮ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಒವೈಸಿ, ಹೈದರಾಬಾದ್ ಕ್ಷೇತ್ರವನ್ನು ತಮ್ಮಿಂದ ಕಿತ್ತುಕೊಳ್ಳಲು ಎಲ್ಲ ರಾಜಕೀಯ ಪಕ್ಷಗಳೂ ಪ್ರಯತ್ನಿಸುತ್ತಿವೆ. ಆದರೆ ಅದು ಎಂದಿಗೂ ಸಾಧ್ಯವಿಲ್ಲ. ನಿಮ್ಮ ಸಂಪೂರ್ಣ ಬಲವನ್ನು ಒಗ್ಗೂಡಿಸಿ ನನ್ನವಿರುದ್ಧ ಇಲ್ಲಿ ಸ್ಪರ್ಧಿಸಿ ಗೆದ್ದು ತೋರಿಸಿ ಎಂದು ಹೇಳಿದ್ದಾರೆ.

‘ಹೈದರಾಬಾದ್ ಕ್ಷೇತ್ರವನ್ನು ನಮ್ಮಿಂದ ಕಿತ್ತುಕೊಳ್ಳಲು ಪ್ರತಿಯೊಬ್ಬರೂ ನೋಡುತ್ತಿದ್ದಾರೆ. ಪ್ರಧಾನಿ ಮೋದಿ ಹಾಗು ಅಮಿತ್‌ ಶಾಗೆ ಇಲ್ಲಿಂದ ಸ್ಫರ್ಧಿಸಲು ಸವಾಲೆಸೆಯುತ್ತೇನೆ. ಹೈದರಾಬಾದ್‌ನಿಂದ ಸ್ಫರ್ಧಿಸಲು ಕಾಂಗ್ರೆಸ್‌ಗೂ ಸವಾಲೆಸೆಯುತ್ತೇನೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಒಟ್ಟಾಗಿ ಸ್ಫರ್ಧಿಸಿದರೂ ನಮ್ಮನ್ನು ಸೋಲಿಸಲು ಆಗುವುದಿಲ್ಲ ಎಂದು ಒವೈಸಿ ಹೇಳಿದ್ದಾರೆ.

ಇದೇ ವೇಳೆ ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಸಾಮೂಹಿಕ ಹಲ್ಲೆ ಕುರಿತು ಕಿಡಿಕಾರಿದ ಒವೈಸಿ, ಅಮಾಯಕರ ಮೇಲೆ ಹಲ್ಲೆ ಮಾಡಿ ಬೆದರಿಕೆ ಒಡ್ಡುವ ಮೂಲಕ ಚುನಾವಣೆ ಗೆಲ್ಲಬಹುದು ಎಂದು ಬಿಜೆಪಿ ಭಾವಿಸಿದ್ದರೆ ಅದು ಎಂದಿಗೂ ಸಾಧ್ಯವಿಲ್ಲ. ಈ ಬಗ್ಗೆ ಪ್ರಧಾನಿ ಮೋದಿ ಕೂಡ ಮೌನ ವಹಿಸಿರುವುದು ಅವರ ಕಾರ್ಯಕರ್ತರ ಕಾರ್ಯಕ್ಕೆ ಅವರು ಸಮ್ಮತಿ ನೀಡಿದಂತಾಗಿದೆ ಎಂದು ಒವೈಸಿ ಹೇಳಿದರು.

Contest from Hyderabad, if you have guts, AIMIM chief Asaduddin Owaisi throws open challenge to PM Narendra Modi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ