ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವು

 

ಬೆಂಗಳೂರು, ಜು.1- ರಸ್ತೆ ಬದಿ ನಿಲ್ಲಿಸಲಾಗಿದ್ದ ಟ್ರ್ಯಾಕ್ಟರ್‍ಗೆ ಅತಿ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಚಿಕ್ಕಪೇಟೆ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೈಕ್ ಸವಾರ ಸಿದ್ದುಹೂಗಾರ್(32) ಮೃತಪಟ್ಟ ದುರ್ದೈವಿ.
ಮೈಸೂರು ರಸ್ತೆ ಪ್ಲೈಓವರ್ ಬಳಿ ಡೀಸೆಲ್ ಖಾಲಿಯಾದ ಪರಿಣಾಮ ಟ್ರ್ಯಾಕ್ಟರ್‍ಅನ್ನು ನಿಲ್ಲಿಸಲಾಗಿತ್ತು. ಇದು ಬೈಕ್ ಸವಾರನ ಗಮನಕ್ಕೆ ಬರದೆ ಅತಿವೇಗವಾಗಿ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸವಾರ ಮೃತಪಟ್ಟಿದ್ದಾನೆ.
ಈ ಸಂಬಂಧ ಚಿಕ್ಕಪೇಟೆ ಸಂಚಾರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ