ಜಿಎಸ್‍ಟಿ ದೋಷಪೂರಿತವಾಗಿದೆ – ಟಿ.ಚಿದಂಬರಂ

ನವದೆಹಲಿ,ಜು.1- ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಿಎಸ್‍ಟಿ ದೋಷಪೂರಿತವಾಗಿದೆ ಎಂದು ಮಾಜಿ ಹಣಕಾಸು ಸಚಿವ ಟಿ.ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ. ಜಿಎಸ್‍ಟಿ ಜಾರಿಗೆ ಒಂದು ವರ್ಷ ಸಂದಿರುವ ಸಂದರ್ಭದಲ್ಲಿ ಸುದ್ದಿ ಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಭದಲ್ಲಿ ಚಿದಂಬರಂ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಜಿಎಸ್‍ಟಿ ವಿನ್ಯಾಸ, ದರ, ರಚನೆ ಹಾಗೂ ಏಕರೂಪ ತೆರಿಗೆ ಪದ್ಧತಿ ಜಾರಿಗೆ ತರುವ ವಿಧಾನ ದೋಷದಿಂದ ಕೂಡಿದ್ದು, ಈ ಯೋಜನೆಯಿಂದ ಸಾಮಾನ್ಯ ಜನರಿಗೆ ಯಾವುದೇ ಲಾಭವಿಲ್ಲ ಎಂದಿದ್ದಾರೆ. ಜಿಎಸ್‍ಟಿ ಜಾರಿಗೆ ಬಂದ ನಂತರ ಸಾಮಾನ್ಯ ಜನರು ತೆರಿಗೆ ಪಾವತಿಸಲು ಸಾಧ್ಯವಿಲ್ಲದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು , ಇದೊಂದು ಜನವಿರೋಧಿ ನಿಲುವು ಎಂದು ಚಿದು ಬಣ್ಣಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ