ರಾತ್ರಿ ಪಾಳಯದ ವೈದ್ಯರಿಲ್ಲದ ಕಾರಣ ರೋಗಿ ಸಾವು!

ದಾಬಸ್‍ಪೇಟೆ, ಜು.2- ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಯದ ವೈದ್ಯರಿಲ್ಲದ ಕಾರಣ ಚಿಕಿತ್ಸೆ ದೊರೆಯದೆ ರೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಹೋಬಳಿಯ ಮಾದೇನಹಳ್ಳಿ ಗ್ರಾಮದ ನಿವಾಸಿ ಸಿದ್ದಗಂಗಮ್ಮ (50) ಮೃತಪಟ್ಟ ಮಹಿಳೆ.
ರಾತ್ರಿ ಸುಮಾರು 8 ಗಂಟೆಗೆ ಸಿದ್ದಗಂಗಮ್ಮ ಅವರಿಗೆ ವಿಪರೀತ ಕೆಮ್ಮು ಬಂದ ಕಾರಣ ಕೂಡಲೇ ಕುಟುಂಬ ಸದಸ್ಯರು 108 ಆ್ಯಂಬುಲೆನ್ಸ್ ವಾಹನದಲ್ಲಿ ದಾಬಸ್‍ಪೇಟೆ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆ ತಂದಿದ್ದು , ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ. ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಆಸ್ಪತ್ರೆಯ ಸಿಬ್ಬಂದಿಗಳು ತಿಳಿಸಿದ್ದಾರೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ದಾಬಸ್‍ಪೇಟೆ ಸರ್ಕಾರಿ ಆಸ್ಪತ್ರೆ 24/7 ಆಗಿದ್ದು , ಯಾವಾಗಲೂ ವೈದ್ಯರಿರಬೇಕು. ಆದರೆ ರಾತ್ರಿ ಯಾವುದೇ ವೈದ್ಯರಿಲ್ಲ. ವೈದ್ಯರ ನಿರ್ಲಕ್ಷ್ಯದಿಂದ ಸಿದ್ದಗಂಗಮ್ಮ ಮೃತಪಟ್ಟಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ