ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ, ಒಬ್ಬನ ಸಾವು

ಚಿತ್ರದುರ್ಗ, ಜು.2- ಪಾದಚಾರಿಯೊಬ್ಬರಿಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಕಮ್ಮತ್ಮರಿಕುಂಟೆ ಬಳಿ ಇಂದು ಬೆಳಗ್ಗೆ ನಡೆದಿದೆ. ರಾಮಪ್ಪ (57) ಮೃತಪಟ್ಟ ಪಾದಚಾರಿ. ಹಿರಿಯೂರಿನ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದು , ಕಳೆದ ಒಂದು ವಾರದಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಸ್ವಗ್ರಾಮವಾದ ಕಮ್ಮತ್ಮರಿಕುಂಟೆಗೆ ಬಂದಿದ್ದರು.
ಕಾಯಿಲೆ ಗುಣಮುಖವಾದ ಹಿನ್ನೆಲೆಯಲ್ಲಿ ಇಂದು ಕೆಲಸಕ್ಕೆ ಹೋಗಲು ತೆರಳುತ್ತಿದ್ದಾಗ ಗೇಟ್ ಬಳಿ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದಿದ್ದು , ತಲೆಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಚಳ್ಳಕೆರೆ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ