ಕಡ್ಡಿಪುಡಿ ವ್ಯಾಪಾರಿಯ ಕೊಲೆ

ಚಿಕ್ಕಬಳ್ಳಾಪುರ, ಜು.2-ಕಡ್ಡಿಪುಡಿ ವ್ಯಾಪಾರಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ಮಂಚೇನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೂಲತಃ ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ಹಿಂದೂಪುರ ನಿವಾಸಿ ಬಿ.ಎ.ವೆಂಕಟೇಶ್(46) ಕೊಲೆಯಾದ ವ್ಯಾಪಾರಿ. ಕಡ್ಡಿಪುಡಿ ಮಾರಿದ ಹಣವನ್ನು ಸಂಗ್ರಹಿಸಿಕೊಂಡು ವೆಂಕಟೇಶ್ ಚಿಕ್ಕಬಳ್ಳಾಪುರದಿಂದ ಹಿಂದೂಪುರಕ್ಕೆ ತೆರಳುತ್ತಿದ್ದಾಗ ತಡರಾತ್ರಿ ಇವರನ್ನು ಹಿಂಬಾಲಿಸಿಕೊಂಡು ಬಂದ ದರೋಡೆಕೋರರು ಗೌರಿಬಿದನೂರು ತಾಲೂಕಿನ ನ್ಯಾಮಗೊಂಡ್ಲು ಗ್ರಾಮದ ಸರ್ಕಾರಿ ಶಾಲೆ ಆವರಣದ ಬಳಿ ಅಡ್ಡಗಟ್ಟಿದ್ದಾರೆ.
ಏನೆಂದು ಕೇಳುವುದರೊಳಗೆ ದರೋಡೆಕೋರರು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ಹಗ್ಗವನ್ನು ಶವದ ಬಳಿಯೇ ಬಿಸಾಡಿ ಪರಾರಿಯಾಗಿದ್ದಾರೆ. ಯಾವ ಕಾರಣಕ್ಕಾಗಿ, ಯಾರು ಕೊಲೆ ಮಾಡಿದ್ದಾರೆಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇಂದು ಮುಂಜಾನೆ ಈ ಮಾರ್ಗದಲ್ಲಿ ಹೋಗುತ್ತಿದ್ದವರು ಶವವನ್ನು ಕಂಡು ಮಂಚೇನಹಳ್ಳಿ ಠಾಣೆ ಪೆÇಲೀಸರಿಗೆ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಪೆÇಲೀಸರು ಪರಿಶೀಲನೆ ನಡೆಸಿ ಶವವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ