ಜು.6ರಂದು ಡಾ.ಎನ್‍ಟಿಆರ್ ರಾಷ್ಟ್ರೀಯ ಪುರಸ್ಕಾರ-2018 ಪ್ರಶಸ್ತಿ ಪ್ರದಾನ

 

ಬೆಂಗಳೂರು, ಜು.3- ಎನ್.ಟಿ.ರಾಮರಾವ್ ಅವರ 96ನೆ ಜಯಂತಿ ಆಚರಣೆ ಅಂಗವಾಗಿ ಇದೇ 6ರಂದು ಸಂಜೆ 6 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಡಾ.ಎನ್‍ಟಿಆರ್ ರಾಷ್ಟ್ರೀಯ ಪುರಸ್ಕಾರ-2018 ಪ್ರಶಸ್ತಿ ನೀಡಲಾಗುವುದು ಎಂದು ಕರ್ನಾಟಕ ತೆಲುಗು ಅಕಾಡೆಮಿ ಕಾರ್ಯಾಧ್ಯಕ್ಷ ಆರ್.ಉಮಾಪತಿ ನಾಯ್ಡು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್‍ಟಿಆರ್ ರಾಷ್ಟ್ರೀಯ ಪುರಸ್ಕಾರ ಪ್ರಶಸ್ತಿಯನ್ನು ರಂಗಭೂಮಿ ಹಾಗೂ ಚಲನಚಿತ್ರ ರಂಗದಲ್ಲಿ ಅಪ್ರತಿಮ ಸೇವೆ ಮಾಡಿದ ಕಲಾವಿದರಿಗೆ ನೀಡಲಾಗುತ್ತಿದ್ದು, ಈ ಬಾರಿ ಸಂಗೀತ ನಿರ್ದೇಶಕರಾದ ಹಂಸಲೇಖ ಹಾಗೂ ಚಿತ್ರನಟಿ ಅರುಂಧತಿ ನಾಗ್ ಅವರಿಗೆ ಈ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ, ಶಾಸಕ ಮುನಿರತ್ನ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಕರ್ನಾಟಕ ತೆಲುಗು ಅಕಾಡೆಮಿ ಅಧ್ಯಕ್ಷ ಹರೀಶ್ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ