ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ಸವಾರ ಸಾವು

ಮಳವಳ್ಳಿ, ಜು.3- ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬುಳಿ ಕೆಂಪನದೊಡ್ಡಿ ಗೇಟ್ ಬಳಿ ನಡೆದಿದೆ. ತಾಲ್ಲೂಕಿನ ಕಿರುಗಾವಲು ಗ್ರಾಮದ ಸಲೀಂ (35) ಮೃತಪಟ್ಟ ಬೈಕ್ ಸವಾರ. ಮಳವಳ್ಳಿ ಕಡೆಗೆ ಮಾವಿನ ಹಣ್ಣು ಮಾರಲು ತಮ್ಮ ಬೈಕ್‍ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮಳವಳ್ಳಿ ಕಡೆಯಿಂದ ಬರುತ್ತಿದ್ದು , ಕಾರು ವೇಗವಾಗಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು , ತಲೆಗೆ ಗಂಭೀರವಾದ ಪೆಟ್ಟು ಬಿದ್ದ ಪರಿಣಾಮ ಸಲೀಂ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿಯದ ಕೊಡಲೇ ಸ್ಧಳಕ್ಕೆ ಸಿಪಿಐ ಶ್ರೀಕಾಂತ್ ಮತ್ತು ಕಿರುಗಾವಲು ಪೆÇಲೀಸ್ ಠಾಣೆ ಪಿಎಸ್‍ಐ ಶಿವಮಾದಯ್ಯ ಭೇಟಿ ನೀಡಿ ಪ್ರಕರಣವನ್ನು ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ