ಹಾವೇರಿ, ಜು.7- ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದ ಎರಡು ಲಾರಿಗಳನ್ನು ರಾಣೆಬೆನ್ನೂರು ಠಾಣೆ ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಹಾವೇರಿ ಜಿಲ್ಲೆ ರಾಣೆ ಬೆನ್ನೂರು ನಗರದಲ್ಲಿ ಇಂದು ಮುಂಜಾನೆ ತುಂಗಭದ್ರಾನದಿಯಿಂದ ಮರಳನ್ನು ತುಂಬಿ ಲಾರಿಯಲ್ಲಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪೆÇಲೀಸರಿಗೆ ಲಭಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೆÇಲೀಸರು ರಾಣೆಬೆನ್ನೂರು ರಸ್ತೆಯಲ್ಲಿ ಲಾರಿಗಳನ್ನು ತಡೆದಿದ್ದಾರೆ. ಈ ವೇಳೆ ಚಾಲಕರು ಲಾರಿಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಲಾರಿಗಳನ್ನು ವಶಕ್ಕೆ ಪಡೆದಿರುವ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.