ಮಳೆಯಿಂದ ಗೋಡೆ ಕುಸಿದು ಇಬ್ಬರ ಸಾವು

ಮಂಗಳೂರು, ಜು.7-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆ ಮೇಲೆ ತಡೆಗೋಡೆ ಕುಸಿದು ಅಜ್ಜಿ ಹಾಗೂ ಮೊಮ್ಮಗ ಮೃತಪಟ್ಟಿರುವ ಘಟನೆ ಪುತ್ತೂರುನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪುತ್ತೂರು ತಾಲ್ಲೂಕು ನಿವಾಸಿಗಳಾದ ಅಜ್ಜಿ ಪಾರ್ವತಿ (65) ಮತ್ತು ಮೊಮ್ಮಗ ಧನುಷ್ (11) ಮೃತಪಟ್ಟ ದುರ್ದೈವಿಗಳು. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಹೆಬ್ಬಾರ ಬೈಲಿನಲ್ಲಿ ತಡರಾತ್ರಿ ಈ ದುರ್ಘಟನೆ ನಡೆದಿದೆ. ಸುದ್ದಿ ತಿಳಿದ ಪುತ್ತೂರು ಸಹಾಯಕ ಕಮೀಷನರ್ ಕೃಷ್ಣಮೂರ್ತಿ ಭೇಟಿ ನೀಡಿ ಕುಟುಂಬಸ್ಥರನ್ನು ಸಂತೈಸಿದ್ದಾರೆ. ಪುತ್ತೂರು ನಗರ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ