ಕಾಡಾನೆಗಳ ಹಾವಳಿ ಬೆಳೆ ನಾಶ

ಹಾಸನ,ಜು.8-ಜಿಲ್ಲೆಯಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇಂದು ಕೂಡ ಆನೆಗಳು ಕಾಣಿಸಿಕೊಂಡು ಜನರಲ್ಲಿ ಆತಂಕವನ್ನುಂಟು ಮಾಡಿವೆ. ಸಕಲೇಶಪುರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಇಂದು ಬೆಳಗ್ಗೆ ಮರಿಯಾನೆಯೊಂದಿಗೆ 15ಕ್ಕೂ ಹೆಚ್ಚು ಕಾಡಾನೆಗಳು ಲಗ್ಗೆ ಇಟ್ಟಿದ್ದು , ರೈತರು ಬೆಳೆದ ಬೆಳೆಗಳನ್ನು ನಾಶ ಮಾಡಿವೆ. ರೈತರು ಬೆಳೆದ ಕಾಫಿ, ಭತ್ತ , ಶುಂಠಿ ಬೆಳೆಯನ್ನು ಹಾನಿ ಮಾಡಿದ್ದು , ರೈತರಲ್ಲಿ ಚಿಂತೆಗೀಡಾಗುವಂತೆ ಮಾಡಿದೆ. ಜಿಲ್ಲೆಗೆ ಆಗಾಗ ಕಾಡಾನೆಗಳು ಬಂದು ಬೆಳೆ ನಾಶ ಮಾಡಿ ಹೋಗುತ್ತಿವೆ. ಈ ಬಗ್ಗೆ ಅಧಿಕಾರಿಗಳಿಗೂ ಕೂಡ ಮಾಹಿತಿ ನೀಡಲಾಗಿದೆ. ಆನೆ ಕಾರಿಡಾರ್ ಮಾಡುವಂತೆ ಇಲ್ಲಿನ ಜನರು ಆಗ್ರಹಿಸಿದ್ದಾರೆ. ಸುದ್ದಿ ತಿಳಿದ ಕೂಡಲೇ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕಾಗಮಿಸಿ ಆನೆ ಓಡಿಸಲು ಹರಸಾಹಸಪಟ್ಟರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ