ಜೀವನದಲ್ಲಿ ಜಿಗುಪ್ಸೆಗೊಂಡು ಬಿಹಾರ ಮೂಲದ ಗಾರ್ಮೆಂಟ್ಸ್ ಉದ್ಯೋಗಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ

 

ಬೆಂಗಳೂರು, ಜು.8- ಜೀವನದಲ್ಲಿ ಜಿಗುಪ್ಸೆಗೊಂಡು ಬಿಹಾರ ಮೂಲದ ಗಾರ್ಮೆಂಟ್ಸ್ ಉದ್ಯೋಗಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೊಮ್ಮನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಿಹಾರ ಮೂಲದ ವೇದಪ್ರಕಾಶ್(24) ಆತ್ಮಹತ್ಯೆ ಮಾಡಿಕೊಂಡ ಗಾರ್ಮೆಂಟ್ಸ್ ಉದ್ಯೋಗಿ.
ಕೋಡಿಚಿಕ್ಕನಹಳ್ಳಿ ಮುನೇಶ್ವರ ಬ್ಲಾಕ್‍ನಲ್ಲಿ ನಾಲ್ಕು ಮಂದಿ ಬಿಹಾರಿಗಳು ರೂಮ್ ಮಾಡಿಕೊಂಡು ವಾಸವಿದ್ದರು. ಅವರೊಂದಿಗಿದ್ದ ವೇದಪ್ರಕಾಶ್ ಗಾರ್ಮೆಂಟ್ಸ್‍ನಲ್ಲಿ ಟೈಲರಿಂಗ್ ಕೆಲಸ ಮಾಡುತ್ತಿದ್ದ.
ನಿನ್ನೆ ಸ್ನೇಹಿತರೆಲ್ಲ ಹೊರ ಹೋದ ಮೇಲೆ ಈತ ಕೊಠಡಿಯಲ್ಲಿ ಫ್ಯಾನ್‍ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾತ್ರಿ 8 ಗಂಟೆಗೆ ಸ್ನೇಹಿತರು ವಾಪಸ್ ಬಂದಾಗ ಬಾಗಿಲು ಬಡಿದರೂ ತೆಗೆಯಲಿಲ್ಲ. ಕಿಟಕಿಯಿಂದ ನೋಡಿದಾಗ ವೇದಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ತಕ್ಷಣ ಪೆÇಲೀಸರಿಗೆ ಹಾಗೂ ವೇದಪ್ರಕಾಶ್ ಪೆÇೀಷಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ಕಳೆದ 15 ದಿನಗಳ ಹಿಂದೆ ವೇದಪ್ರಕಾಶ್ ಊರಿಗೆ ಹೋಗಿ ಬಂದಾಗಿನಿಂದ ಬೇಸರದಿಂದಿದ್ದ. ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಜಿಗುಪ್ಸೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೆÇಲೀಸರು ಶಂಕಿಸಿದ್ದಾರೆ.
ಮೃತದೇಹವನ್ನು ಸೆಂಟ್‍ಜಾನ್ ಆಸ್ಪತ್ರೆಯಲ್ಲಿ ಇಡಲಾಗಿದೆ. ಬೊಮ್ಮನಹಳ್ಳಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ