ಆಟೋ ಮಗುಚಿ ವಿದ್ಯಾರ್ಥಿ ಸಾವು

ಮೈಸೂರು, ಜು.9- ಆಪೆ ಆಟೋವೊಂದು ಮಗುಚಿಬಿದ್ದ ಪರಿಣಾಮ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ತಲಕಾಡು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉಕಲಗೆರೆ ಗ್ರಾಮದ ನಿವಾಸಿ ಸಿದ್ದರಾಮ (15) ಮೃತಪಟ್ಟ ದುರ್ದೈವಿ. ಇಂದು ಬೆಳಗ್ಗೆ ಶಿವಮ್ಮ, ಮಹದೇವಮ್ಮ, ಲಕ್ಷ್ಮಿ, ಮರಿಸ್ವಾಮಿ ಹಾಗೂ ಸಿದ್ದರಾಮ ಆಪೆ ಆಟೋದಲ್ಲಿ ತೆರಳುತ್ತಿದ್ದರು. ಈ ವೇಳೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ನರೀಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಮಗುಚಿ ಬಿದ್ದಿದೆ. ಈ ವೇಳೆ ಸಿದ್ದರಾಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಟೋದಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಟಿ.ನರಸೀಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲು ಮಾಡಲಾಗಿದೆ. ಇವರು ಮಳವಳ್ಳಿ ಬಳಿ ಇರುವ ಶಿಂಷಾಗೆ ತೆರಳಿ ಹಿಂದಿರುಗುತ್ತಿದ್ದರು ಎಂದು ಪೆÇಲೀಸರು ತಿಳಿಸಿದ್ದಾರೆ. ಈ ಬಗ್ಗೆ ತಲಕಾಡು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೆÇಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ