ಅಂಗಡಿಯಲ್ಲಿದ್ದ ಮಹಿಳೆಯ ಸರ ದೋಚಿ ಪರಾರಿ

ಕೆ.ಆರ್.ಪೇಟೆ, ಜು.12- ಸಿಗರೇಟ್ ಕೊಳ್ಳುವ ನೆಪದಲ್ಲಿ ಬಂದು ಅಂಗಡಿಯಲ್ಲಿದ್ದ ಮಹಿಳೆಯ ಸರವನ್ನು ಇಬ್ಬರು ಸರಗಳ್ಳರು ದೋಚಿರುವ ಘಟನೆ ಮುತ್ತುರಾಯಸ್ವಾಮಿ ಬಡಾವಣೆಯಲ್ಲಿ ನಡೆದಿದೆ. ಮುತ್ತುರಾಯಸ್ವಾಮಿ ಬಡಾವಣೆಯ ಶಿಕ್ಷಕ ಮಹದೇವಪ್ಪ ಅವರ ಪತ್ನಿ ಜಗದಾಂಬ ಎಂಬುವರ 35 ಗ್ರಾಂ ಚಿನ್ನದ ಸರವನ್ನು ಕಿತ್ತುಕಳ್ಳರು ಬೈಕ್‍ನಲ್ಲಿ ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿ 8.45ರ ವೇಳೆ ಇಬ್ಬರು ಅಂಗಡಿಯಲ್ಲಿ ಸಿಗರೇಟ್ ಕೊಂಡು ಅಲ್ಲೆ ಸೇದುತ್ತಾ ನಿಂತಿದ್ದರು. ಈ ಸಂದರ್ಭದಲ್ಲಿ ಜಗದಾಂಬ ಅವರು ಅಂಗಡಿಯ ಬಾಗಿಲು ಹಾಕುವ ಕಡೆ ಮಗ್ನರಾಗಿದ್ದಾಗ ದುಷ್ಕರ್ಮಿಗಳು ಆಕೆಯ ಕತ್ತಿನಲ್ಲಿದ್ದ ಸರವನ್ನು ಕಿತ್ತು ಅಲ್ಲೇ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್‍ನಲ್ಲಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ನಾಗಮಂಗಲ ಡಿವೈಎಸ್‍ಪಿ ಹಾಗೂ ಪಟ್ಟಣ ಠಾಣೆ ಪೆÇಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ