ಸ್ನೇಹಿತರಿಬ್ಬರು ಬರ್ತ್ ಡೇ ಪಾರ್ಟಿಗಾಗಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ಅತಿ ವೇಗದಿಂದಾಗಿ ಬ್ಯಾರಿಕೇಡ್‍ಗೆ ಡಿಕ್ಕಿ ಹೊಡೆದು ಸಾವು

 

ಬೆಂಗಳೂರು, ಜು.13- ಸ್ನೇಹಿತರಿಬ್ಬರು ಬರ್ತ್ ಡೇ ಪಾರ್ಟಿಗಾಗಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ಅತಿ ವೇಗದಿಂದಾಗಿ ಬ್ಯಾರಿಕೇಡ್‍ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬಾತ ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಲೇ ಔಟ್ ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುಂಕದಕಟ್ಟೆ ನಿವಾಸಿ ರಂಜಿತ್ (24) ಮೃತಪಟ್ಟ ಯುವಕ.
ನಿನ್ನೆ ಸ್ನೇಹಿತ ವಿನೋದ್‍ಕುಮಾರನ ಬರ್ತ್ ಡೇ ಇತ್ತು. ಸ್ನೇಹಿತರೆಲ್ಲಾ ಸೇರಿ ಪಾರ್ಟಿ ಮಾಡುವ ಸಲುವಾಗಿ ರಂಜಿತ್ ರಾತ್ರಿ 9 ಗಂಟೆಯಲ್ಲಿ ವಿನೋದ್‍ಕುಮಾರ್ ಜತೆ ಬೈಕ್‍ನಲ್ಲಿ ಹೋಗುತ್ತಿದ್ದನು.
ನೈಸ್ ರಸ್ತೆಯ ಸೋಂಪುರ ಟೋಲ್ ಸಮೀಪ ಬ್ಯಾರಿಕೇಡ್ ಹಾಕಿರುವುದು ಗಮನಿಸದೆ ವೇಗವಾಗಿ ಬೈಕ್ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದ ಪರಿಣಾಮ ರಂಜಿತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸುದ್ದಿ ತಿಳಿದ ಕುಮಾರಸ್ವಾಮಿ ಸಂಚಾರಿ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ಕೆಂಪೇಗೌಡ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಸಾಗಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿದ್ದ ವಿನೋದ್‍ಕುಮಾರ್‍ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಕುಮಾರಸ್ವಾಮಿ ಸಂಚಾರಿ ಠಾಣೆ ಪೆÇಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ