ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ

 

ಬೆಂಗಳೂರು, ಜು.13- ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ವಿವೇಕನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆಕಾಶ್ (23) ಕೊಲೆಯಾದ ಯುವಕ. ಈಜಿಪುರದ ತರಕಾರಿ ಮಾರುಕಟ್ಟೆ ಬಳಿ ರಾತ್ರಿ ಆಕಾಶ್ ಹಾಗೂ ಮತ್ತೊಬ್ಬನ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿದೆ.
ಈ ವೇಳೆ ಮಚ್ಚಿನಿಂದ ಆಕಾಶ್‍ನ ತಲೆ, ಕೈಗೆ ಹಲ್ಲೆ ನಡೆಸಿದಾಗ, ಆಕಾಶ್ ಹಲ್ಲೆಕೋರನಿಂದ ತಪ್ಪಿಸಿಕೊಂಡು ಸಮೀಪದ ಸ್ಮಶಾನದ ಬಳಿ ಬಂದು ಕುಸಿದು ಬಿದ್ದಿದ್ದಾನೆ.
ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಆಕಾಶ್ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇಂದು ಮುಂಜಾನೆ ಈ ಮಾರ್ಗದಲ್ಲಿ ಹೋಗುತ್ತಿದ್ದವರು ಗಮನಿಸಿ ತಕ್ಷಣ ವಿವೇಕನಗರ ಪೆÇಲೀಸರಿಗೆ ತಿಳಿಸಿದ್ದಾರೆ.
ಕೊಲೆಗೆ ಕಾರಣ ತಿಳಿದುಬಂದಿಲ್ಲ. ಹಳೆ ದ್ವೇಷದಿಂದ ಹಲ್ಲೆ ನಡೆದಿರಬಹುದು ಎಂದು ಪೆÇಲೀಸರು ಶಂಕೆ ವ್ಯಕ್ತಪಡಿಸಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ