ಯೋನಾಸ್ ಜೋನ್ಸ್‍ರನ್ನು ವಿಧಾನಪರಿಷತ್‍ಗೆ ನೇಮಕ ಮಾಡುವಂತೆ ಒತ್ತಾಯ

Varta Mitra News

 

ಬೆಂಗಳೂರು, ಜು.16- ದಲಿತ ರೈತ ಮುಖಂಡರಾದ ಯೋನಾಸ್ ಜೋನ್ಸ್‍ರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಿಸುವಂತೆ ಅಖಿಲ ಕರ್ನಾಟಕ ಸೂಫಿಸಂತರ ಸಂಘ ಒತ್ತಾಯಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಸೂಫಿ ವಲೀಬಾ ಅವರು, ಯೋನಾಸ್ ಜೋನ್ಸ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಸಿನಿಮಾ ರಂಗದಲ್ಲಿ 22 ವರ್ಷ ಕಾಲ ದುಡಿದಿದ್ದಾರೆ. ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಸಾಮಾಜಿಕ ಕ್ಷೇತ್ರದಲ್ಲೂ ಅಪಾರ ಸೇವೆ ಸಲ್ಲಿಸಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಇವರಿಗೆ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಲಾಗಿತ್ತು. ಆನಂತರ ನಿಗಮ ಮಂಡಳಿಯಲ್ಲಾದರೂ ಸ್ಥಾನ ಕೊಡಲು ಒತ್ತಾಯಿಸಿದ್ದರೂ ಪರಿಗಣಿಸಿಲ್ಲ. ಈ ಹಿನ್ನೆಲೆಯಲ್ಲಿ ಈಗ ಯೋನಾಸ್ ಜೋನ್ಸ್ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವ ಮೂಲಕ ಅವರು ಹೆಚ್ಚು ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಎಂ.ಎಂ.ರಾಜು, ಲಯನ್ ಬಾಲಕೃಷ್ಣ, ಚಂದ್ರಪ್ಪ ಮತ್ತಿತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ