ಬೈಕ್ ಕಳ್ಳರ ಬಂಧನ

ಮೈಸೂರು, ಜು.17-ನಕಲಿ ಕೀ ಬಳಸಿ ಬೈಕ್‍ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಎನ್.ಆರ್. ಠಾಣೆ ಪೆÇಲೀಸರು ಬಂಧಿಸಿ 2 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಕೇರಳ ಮೂಲದ ವಿಷ್ಣು, ಸಫ್ರುವುದ್ದೀನ್ ಬಂಧಿತ ಆರೋಪಿಗಳು. ಎನ್.ಆರ್ ಪೆÇಲೀಸ್ ಠಾಣಾ ವ್ಯಾಪ್ತಿಯ ಆರ್.ಎಸ್.ನಾಯ್ಡು ನಗರದ ಪುಷ್ಪಾಶ್ರಮ ಜಂಕ್ಷನ್ ಬಳಿ ಇಬ್ಬರು ವ್ಯಕ್ತಿಗಳು ನಂಬರ್ ಪ್ಲೇಟ್ ಇಲ್ಲದ ಎರಡು ಬೈಕ್‍ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಕಳೆದ ತಿಂಗಳು ಕೇರಳದಲ್ಲಿ ನಕಲಿ ಕೀ ಬಳಸಿ 2 ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಅವುಗಳನ್ನು ಮಾರಾಟ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡಿದ್ದಾರೆ. ಬಂಧಿತರಿಂದ 2 ಬೈಕ್‍ಗಳನ್ನು ಎನ್.ಆರ್.ಠಾಣೆ ಪೆÇಲೀಸರು ವಶಪಡಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ