ಕುರಿ ಕಳ್ಳತನ ಪ್ರಶ್ನಿಸಿದ ವ್ಯಕ್ತಿಯ ಮೇಲೆ ಹಲ್ಲೆ

Varta Mitra News

ಕೋಲಾರ, ಜು.18- ಕುರಿ ಕಳ್ಳತನ ಪ್ರಶ್ನಿಸಿದ ವ್ಯಕ್ತಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕುಂಬಾರಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೆದ್ದಣ್ಣ ಹಲ್ಲೆಗೊಳಗಾದ ವ್ಯಕ್ತಿ. ಕುರಿ ದೊಡ್ಡಿಯಲ್ಲಿದ್ದ ಮೂರು ಕುರಿಗಳನ್ನು ಹೊತ್ತೊಯ್ಯುತ್ತಿದ್ದ ಚಿನ್ನಪ್ಪನನ್ನು ಪೆದ್ದಣ್ಣ ಪ್ರಶ್ನಿಸಿದ್ದು, ಕಳ್ಳತನಕ್ಕೆ ಅಡ್ಡಿಪಡಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಚಿನ್ನಪ್ಪ ಕೈನಲ್ಲಿದ್ದ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಇವರ ಜಗಳದ ಚೀರಾಟ ಕೇಳಿದ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿ ಜಗಳ ಬಿಡಿಸಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಪೆದ್ದಣ್ಣನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ