ರೈತರ ಸಾಲ ಮನ್ನಾ ವಿಷಯ: 2-3ದಿನಗಳಲ್ಲಿ ಬ್ಯಾಂಕ್‍ಗಳ ಜತೆ ಒಡಂಬಡಿಕೆಗೆ ಸಹಿ

ಬೆಂಗಳೂರು, ಜು.19- ರೈತರ ಸಾಲ ಮನ್ನಾ ವಿಷಯದಲ್ಲಿ ಯಾರಿಗೂ ಅನುಮಾನ ಬೇಡ. ಇನ್ನೆರಡು ಮೂರು ದಿನಗಳಲ್ಲಿ ಬ್ಯಾಂಕ್‍ಗಳ ಜತೆ ಒಡಂಬಡಿಕೆಗೆ ಸಹಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ರೀತಿಯ ಲೆಕ್ಕಾಚಾರಗಳನ್ನು ಹಾಕಿದ ನಂತರವೇ ಸಾಲ ಮನ್ನಾ ಮಾಡಲಾಗಿದೆ. ಸಹಕಾರ ಇಲಾಖೆ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಸಾಲವನ್ನು ಮನ್ನಾ ಮಾಡಲಾಗುತ್ತದೆ. ರಾಷ್ಟ್ರೀಕೃತ ಬ್ಯಾಂಕುಗಳ ಜತೆಯೂ ಚರ್ಚೆ ನಡೆಯುತ್ತಿದೆ. ಇನ್ನೆರಡು ಮೂರು ದಿನಗಳಲ್ಲಿ ಒಡಂಬಡಿಕೆಗೆ ಸಹಿ ಹಾಕಲಾಗುತ್ತದೆ. ಇದರಲ್ಲಿ ಯಾರಿಗೂ ಅನುಮಾನ ಬೇಡ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಿನ್ನೆ ದೆಹಲಿಯಲ್ಲಿ ನಡೆದ ಸಂಸದರ ಸಭೆ ಯಶಸ್ವಿಯಾಗಿದೆ. ಎಲ್ಲಾ ಸಂಸದರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಉತ್ತಮ ಫಲಿತಾಂಶವನ್ನು ನಿರೀಕ್ಷೆ ಮಾಡಲಾಗುತ್ತಿದೆ ಎಂದರು.

Farmers’ loan waiver, sign with banks agreement,HD Kumaraswamy

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ