ಬಿಜೆಪಿಯವರಿಂದ ಕಾಮಗಾರಿಗಳ ಹ್ಶೆಜಾಕ್ – ಶಾಸಕ ಶ್ಯಾಮನೂರು ಶಿವಶಂಕರಪ್ಪ

ದಾವಣಗೆರೆ, ಜು.19-ಕಾಂಗ್ರೆಸ್ ಮಾಡಿದ್ದ ಕಾಮಗಾರಿಗಳನ್ನು ಬಿಜೆಪಿಯವರು ಹೈಜಾಕ್ ಮಾಡುತ್ತಿದ್ದಾರೆ ಎಂದು ಶಾಸಕ ಶ್ಯಾಮನೂರು ಶಿವಶಂಕರಪ್ಪ ಆರೋಪಿಸಿದ್ದಾರೆ. ಚಂದ್ರಮೌಳೇಶ್ವರ ದೇವಸ್ಥಾನ ಪಾರ್ಕ್‍ನಲ್ಲಿ ನೂತನವಾಗಿ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಸ್ಥಾಪಿಸಲಾಗಿರುವ ಶುದ್ಧ ನೀರಿನ ಘಟಕ ಉದ್ಘಾಟಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಸದರಿಗೆ ಐಪೆÇೀನ್ ಕೊಟ್ಟಿರುವುದರ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಇದರಲ್ಲಿ ತಪ್ಪೇನಿದೆ ? ನನಗೆ ಕೊಟ್ಟರೆ ನಾನು ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೆಲಸದ ಒತ್ತಡದಿಂದ ಕಣ್ಣೀರು ಹಾಕಿರಬಹುದು. ಇದು ಅಪರಾಧವೇನಲ್ಲ ಎಂದು ಸಮರ್ಥಿಸಿಕೊಂಡರು.ಮಹಾನಗರ ಪಾಲಿಕೆ ಸದಸ್ಯರಾದ ದಿನೇಶ್ ಕೆ.ಶೆಟ್ಟಿ, ಲಕ್ಷ್ಮೀದೇವಿ, ಅನಿತಾಬಾಯಿ, ಮಲ್ತೇಶ್‍ಜಾದವ್, ವೀರಣ್ಣಗೌಡ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ