ಬೈಕ್ ಅಡ್ಡಗಟ್ಟಿ ಕೊಲೆ

Varta Mitra News

ಮಂಡ್ಯ, ಜು.19- ಮಾರುಕಟ್ಟೆಗೆ ಬೈಕ್‍ನಲ್ಲಿ ಹೂವು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಕರಡಿಕೊಪ್ಪಲು ಗ್ರಾಮದ ಗುನ್ನಾಯಕನಹಳ್ಳಿ ಗ್ರಾಮದ ಬಳಿ ಇಂದು ಮುಂಜಾನೆ ನಡೆದಿದೆ. ಕರಡಿಕೊಪ್ಪಲು ಗ್ರಾಮದ ಸ್ವಾಮಿ (41) ಕೊಲೆಯಾದ ವ್ಯಕ್ತಿಯಾಗಿದ್ದು , ಇಂದು ಬೆಳಗ್ಗೆ ತನ್ನ ಜಮೀನಿನಲ್ಲಿ ಬೆಳೆದಿದ್ದ ಸೇವಂತಿಗೆ ಹೂವನ್ನು ಮಾರುಕಟ್ಟೆಗೆ ಹಾಕಲು ಟಿವಿಎಸ್ ಮೊಪೆಡ್‍ನಲ್ಲಿ ಹೋಗುವಾಗ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಇಂದು ಬೆಳಗ್ಗೆ ಗ್ರಾಮದ ವ್ಯಕ್ತಿಯೊಬ್ಬರು ಶವವನ್ನು ನೋಡಿ ತಕ್ಷಣ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ನೋಡಿದಾಗ ಅಪಘಾತ ರೀತಿಯಲ್ಲಿ ಹತ್ಯೆ ನಡೆದಿರುವುದನ್ನು ತಿಳಿದು ತಕ್ಷಣ ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ. ಶಿವಳ್ಳಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ