ಗಾಂಜಾ ಸಾಗಿಸುತ್ತಿದ್ದವರ ಬಂಧನ

Varta Mitra News

ಮೈಸೂರು, ಜು.20-ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಆಲನಹಳ್ಳಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಮಂಗಳೂರಿನ ಪ್ರವೀಣ್ ಪೂಜಾರಿ ಮತ್ತು ಗಿರೀಶ್ ಬಂಧಿತರಾಗಿದ್ದು, ಇವರಿಂದ 700 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮಂಗಳೂರಿನಿಂದ ಮೈಸೂರಿಗೆ ಕಾರಿನಲ್ಲಿ ಬಂದಿದ್ದ ಈ ಇಬ್ಬರು ವ್ಯಕ್ತಿಯೊಬ್ಬರಿಂದ 12 ಸಾವಿರ ರೂ. ನೀಡಿ ಗಾಂಜಾ ಖರೀದಿಸಿದ್ದರು ಎಂಬುದು ಪೆÇಲೀಸರ ವಿಚಾರಣೆಯಿಂದ ತಿಳಿದುಬಂದಿದೆ. ಮಂಗಳೂರಿನಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಈ ಇಬ್ಬರು ಮೈಸೂರಿನಲ್ಲಿ ವ್ಯಕ್ತಿಯೊಬ್ಬರಿಂದ ಗಾಂಜಾ ಪಡೆಯಲು ಬಂದಿದ್ದಾಗಿ ಪೆÇಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ.
ಈ ವೇಳೆ ಲೋಹಿತ್ ಎಂಬಾತ ಪರಾರಿಯಾಗಿದ್ದು, ಈತನಿಗಾಗಿ ತನಿಖೆ ಮುಂದುವರೆದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ