ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳರ ಬಂಧನ

ಮೈಸೂರು, ಜು.20- ಇಬ್ಬರು ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳರನ್ನು ಎನ್.ಆರ್.ಠಾಣೆ ಪೆÇಲೀಸರು ಬಂಧಿಸಿ ಏಳು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಕೇರಳದ ಮೈನಾಡಿನ ನಿವಾಸಿಗಳಾದ ಸಫ್ರುದ್ದೀನ್ ಹಾಗೂ ವಿಷ್ಣು ಬಂಧಿತ ಕಳ್ಳರು. ಬಂಧಿತರು ಕಳವು ಮಾಡಿದ್ದ ಬೈಕ್‍ಗಳನ್ನು ನಗರದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೆÇಲೀಸರು ದಾಳಿ ಮಾಡಿ ಈ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ನಗರದ ಮಂಡಿಮೊಹಲ್ಲಾ, ಲಷ್ಕರ್ ಮೊಹಲ್ಲಾ ಹಾಗೂ ಕೇರಳದಲ್ಲಿ ನಕಲೀ ಕೀ ಬಳಸಿ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ.
ಬಂಧಿತರಿಂದ 8ಲಕ್ಷ ರೂ. ಮೌಲ್ಯದ ಏಳು ದ್ವಿಚಕ್ರ ವಾಹನಗಳನ್ನು ಪೆÇಲೀಸರು ವಶಪಡಿಸಿಕೊಂಡಿದ್ದಾರೆ.
ಎನ್.ಆರ್.ಠಾಣೆ ಇನ್ಸ್‍ಪೆಕ್ಟರ್ ಅಶೋಕ್‍ಕುಮಾರ್ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ