ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಇಂದು ಆಷಾಢ ಶುಕ್ರವಾರ ಅವಿಶ್ವಾಸ ಮತ ಎದುರಿಸುವ ಅಗ್ನಿಪರೀಕ್ಷೆ ಎದುರಾಗಿದೆ. ಇದರಲ್ಲಿ ಗೆದ್ದುಬರುವ ವಿಶ್ವಾಸದಲ್ಲಿ ಬಿಜೆಪಿ ಇದ್ದರೂ ಕೂಡ ಲೋಕಸಭೆಯಲ್ಲಿ ಏನಾಗುತ್ತದೆ ಎಂಬ ಇಡೀ ದೇಶದ ಜನತೆಯ ಗಮನ ಶಕ್ತಿಕೇಂದ್ರ ದೆಹಲಿಯ ಸಂಸತ್ತು ಮೇಲಿದೆ. ಲೋಕಸಭೆಯಲ್ಲಿ ಇಂದು ತೀವ್ರ ಗದ್ದಲ, ಕೋಲಾಹಲ ಏರ್ಪಡುವ ಸಾಧ್ಯತೆಯಿರುವುದರಿಂದ ಸಂಸದರು ಸಂಯಮ ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಹೋದ್ಯೋಗಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅವಿಶ್ವಾಸ ನಿರ್ಣಯ ಮಂಡನೆ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಅವರು, ”ಇಂದು ನಮ್ಮ ಸಂಸತ್ತಿನ ಪ್ರಜಾಪ್ರಭುತ್ವದಲ್ಲಿ ಬಹಳ ಮುಖ್ಯವಾದ ದಿನ. ಈ ಸಂದರ್ಭದಲ್ಲಿ ನನ್ನ ಸಂಸದ ಸಹೋದ್ಯೋಗಿಗಳು ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ನನಗಿದೆ. ಇಲ್ಲಿ ರಚನಾತ್ಮಕ, ಸಮಗ್ರ ಮತ್ತು ಮುಕ್ತ ಚರ್ಚೆ ನಡೆಯುತ್ತದೆ ಎಂದು ಭಾವಿಸುತ್ತೇನೆ. ಸಂಸತ್ತಿನಲ್ಲಿ ಗೌರವಯುತವಾಗಿ ನಡೆದುಕೊಂಡು ರಚನಾತ್ಮಕ ಚರ್ಚೆ ನಡೆಸಿ ಉತ್ತಮ ಆಡಳಿತವನ್ನು ಜನತೆಗೆ ನೀಡೋಣ, ಆ ಮೂಲಕ ಸಂವಿಧಾನವನ್ನು ರಚಿಸಿದವರಿಗೆ ಗೌರವ ಸಲ್ಲಿಸೋಣ, ದೇಶದ ಜನತೆ ನಮ್ಮನ್ನು ಬಹಳ ಹತ್ತಿರದಿಂದ ಗಮನಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.ಇಂದಿನ ಕಲಾಪದಲ್ಲಿ ಲೋಕಸಭೆಯಲ್ಲಿ ಆಡಳಿತಾರೂಢ ಎನ್ ಡಿಎ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಗದ್ದಲ, ಕೋಲಾಹಲವೇರ್ಪಡುವ ಸಾಧ್ಯತೆಯಿದೆ. ಎನ್ ಡಿಎಯ ಮಾಜಿ ಮೈತ್ರಿಪಕ್ಷ ಟಿಡಿಪಿ ಅವಿಶ್ವಾಸ ನಿರ್ಣಯವನ್ನು ಮಂಡಿಸಿದೆ.
Related Articles
ಆಂಧ್ರಕ್ಕೆ ವಿಶೇಷ ಸ್ಥಾನಕ್ಕೆ ಆಗ್ರಹ: ಪ್ರಧಾನಿ ಮೋದಿ ವಿರುದ್ಧ ಉಪವಾಸ ಸತ್ಯಾಗ್ರಹ ಸಾರಿದ ಚಂದ್ರಬಾಬು ನಾಯ್ಡು
April 15, 2018
Samachar Network
ರಾಷ್ಟ್ರೀಯ, ರಾಜಕೀಯ, ಪ್ರಧಾನಿ ಮೋದಿ
Comments Off on ಆಂಧ್ರಕ್ಕೆ ವಿಶೇಷ ಸ್ಥಾನಕ್ಕೆ ಆಗ್ರಹ: ಪ್ರಧಾನಿ ಮೋದಿ ವಿರುದ್ಧ ಉಪವಾಸ ಸತ್ಯಾಗ್ರಹ ಸಾರಿದ ಚಂದ್ರಬಾಬು ನಾಯ್ಡು
Seen By: 77 ಅಮರಾವತಿ:ಏ-15; ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಟಿಡಿಪಿ ಮುಖ್ಯಸ್ಥ, ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದು, ತಮ್ಮ ಹೋರಾಟ [more]
ಬುದ್ದುಗೆ ಅಪ್ಪಿಕೊಳ್ಳಲು ಪ್ರಧಾನಿ ಮೋದಿ ಅವಕಾಶ ನೀಡಬಾರದಿತ್ತು
July 21, 2018
Samachar Network-CLB
ರಾಷ್ಟ್ರೀಯ, ರಾಜಕೀಯ
Comments Off on ಬುದ್ದುಗೆ ಅಪ್ಪಿಕೊಳ್ಳಲು ಪ್ರಧಾನಿ ಮೋದಿ ಅವಕಾಶ ನೀಡಬಾರದಿತ್ತು
Seen By: 138 ನವದೆಹಲಿ:ಜು-೨೧: ಪ್ರಧಾನಿ ನರೇಂದ್ರ ಮೋದಿಯವರು ಅಪ್ಪಿಕೊಳ್ಳಲು ‘ಬುದ್ದು’ಗೆ ಅವಕಾಶ ನೀಡಬಾರದಿತ್ತು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ [more]
ಮೊದಲ ಬಾರಿ ಮಹದಾಯಿ ವಿವಾದ ಪ್ರಸ್ತಾಪಿಸಿದ ಪ್ರಧಾನಿ ಮೋದಿ
May 5, 2018
Samachar Network-CLB
ರಾಜ್ಯ, ರಾಷ್ಟ್ರೀಯ, ರಾಜಕೀಯ, ಪ್ರಧಾನಿ ಮೋದಿ
Comments Off on ಮೊದಲ ಬಾರಿ ಮಹದಾಯಿ ವಿವಾದ ಪ್ರಸ್ತಾಪಿಸಿದ ಪ್ರಧಾನಿ ಮೋದಿ
Seen By: 78 ಗದಗ:ಮೇ-5: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಗದಗಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದೇ ಮೊದಲ ಬಾರಿಗೆ ಮಹದಾಯಿ ವಿಚಾರ ಪ್ರಸ್ತಾಪಿಸಿದ್ದು ವಿಶೇಷ. ಮಹದಾಯಿ [more]