ಮನೆಗೆ ನುಗ್ಗಿ ನಗದು ದೋಚಿದ ಕಳ್ಳರು

ಕೋಲಾರ,ಜು.22- ಪತ್ರಕರ್ತರೊಬ್ಬರ ಮನೆಗೆ ನುಗ್ಗಿದ ಕಳ್ಳರು ಪಿಸ್ತೂಲ್ ಹಾಗೂ ನಗದನ್ನು ದೋಚಿ ಪರಾರಿಯಾಗಿರುವ ಘಟನೆ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮುನೇಶ್ವರನಗರದಲ್ಲಿ ಹಿರಿಯ ಪತ್ರಕರ್ತ ವಾಸುದೇವ ಹೊಳ್ಳ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಕೋಲಾರದ ಮುನ್ನೇಶ್ವರನಗರದಲ್ಲಿರುವ ಮನೆಗೆ ಆಗಾಗ ಬಂದುಹೋಗುತ್ತಾರೆ. ಇದನ್ನೆಲ್ಲ ಅರಿತ ಕಳ್ಳರು ರಾತ್ರಿ ಮನೆಯ ಬಾಗಿಲನ್ನು ರಾಡ್‍ನಿಂದ ಮೀಟಿ ಬೀರುವಿನಲ್ಲಿದ್ದ ಲೈಸೆನ್ಸ್ ಹೊಂದಿದ ಪಿಸ್ತೂಲ್ ಹಾಗೂ 20 ಸಾವಿರ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಅಕ್ಕಪಕ್ಕದ ಮನೆಯವರಿಗೆ ಕಳ್ಳತನವಾಗಿರುವ ಬಗ್ಗೆ ಗೊತ್ತಾಗಿದ್ದು, ವಾಸುದೇವ ಅವರಿಗೆ ವಿಷಯ ತಿಳಿಸಿದ್ದಾರೆ. ಈ ಬಗ್ಗೆ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೆÇಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ