ಲಾಡ್ಜ್‍ಲ್ಲಿ ವೇಶ್ಯವಾಟಿಕೆ ನಾಲ್ವರ ಬಂಧನ

ತುಮಕೂರು, ಜು.22-ಲಾಡ್ಜ್‍ವೊಂದರಲ್ಲಿ ವೇಶ್ಯವಾಟಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ನಗರ ಪೆÇಲೀಸರು ಬಂಧಿಸಿದ್ದಾರೆ. ಗುಬ್ಬಿಯ ನಿವಾಸಿ ಶ್ರೀಧರ್(33)ಸೇರಿದಂತೆ ನಾಲ್ವರನ್ನು ಬಂಧಿಸಿದ್ದು, ಮೂವರ ಹೆಸರು ತಿಳಿದುಬಂದಿಲ್ಲ. ಖಾಸಗಿ ಬಸ್ ನಿಲ್ದಾಣದ ಸಮೀಪ ಇರುವ ಪ್ರಶಾಂತ್ ಟಾಕೀಸ್ ಪಕ್ಕದಲ್ಲಿರುವ ಲಾಡ್ಜ್‍ನಲ್ಲಿ ವೇಶ್ಯವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಿನ್ನೆ ರಾತ್ರಿ ಈ ದಾಳಿ ನಡೆಸಲಾಗಿದೆ.
ಡಿವೈಎಸ್ಪಿ ನಾಗರಾಜ್ ಅವರ ಮಾರ್ಗದರ್ಶನದಲ್ಲಿ ನಗರದ ವೃತ್ತ ನಿರೀಕ್ಷಕ ಚಂದ್ರಶೇಖರ್, ಸಬ್‍ಇನ್‍ಸ್ಪೆಕ್ಟರ್ ವಿಜಯಕುಮಾರ್ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ನಾಲ್ವರನ್ನು ಬಂಧಿಸಲಾಗಿದೆ. ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ