ಛಾವಣಿ ಕುಸಿತದಿಂದ ಮನೆಯರು ಪಾರು

Varta Mitra News

ಬಾಗಲಕೋಟೆ, ಜು.22- ಸತತವಾಗಿ ಸುರಿಯುತ್ತಿರುವ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಮನೆಯವರು ಅಪಾಯದಿಂದ ಪಾರಾಗಿರುವ ಘಟನೆ ಜಮಖಂಡಿ ತಾಲ್ಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಕಂಕನವಾಡಿಯಲ್ಲಿ ಈ ಘಟನೆ ನಡೆದಿದ್ದು, ಛಾವಣಿ ಕುಸಿತದಿಂದ ಮನೆಯಲ್ಲಿದ್ದ ದಿನಸಿ ಸೇರಿದಂತೆ ಎಲ್ಲ ವಸ್ತುಗಳು ಹಾಳಾಗಿವೆ. ಆದರೆ, ಯಾವುದೇ ಜೀವಾಪಾಯವಾಗಿಲ್ಲ.
ಮನೆಯವರಿಗೆ ಪರಿಹಾರ ನೀಡಬೇಕೆಂದು ತಾಲ್ಲೂಕು ಆಡಳಿತವನ್ನು ಸ್ಥಳೀಯರು ಆಗ್ರಹಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ