ಪ್ರಣಾಳಿಕೆಗೆ ಕಿಂಚಿತ್ತು ಕಿಮ್ಮತ್ತಿಲ್ಲ- ಶೆಟ್ಟರ

ಹುಬ್ಬಳ್ಳಿ- ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ. ಅನುಮಾನವಿದ್ದರೆ, ಈ ಸಿ.ಎಂ. ಕುಮಾರಸ್ವಾಮಿ ತಮ್ಮ ಪಕ್ಷದ ಪ್ರಣಾಳಿಕೆ ತೆರೆದು ನೋಡಲಿ ಎಂದು ಮಾಜಿ ಸಿ.ಎಂ. ಜಗದೀಶ್ ಶೆಟ್ಟರ ಸಮ್ಮಿಶ್ರ ಸರ್ಕಾರದ ವಿರುದ್ಧ ವಗ್ದಾಳಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರೈತರ ಸಾಲ ಮನ್ನಾದಲ್ಲಿ ಸಾಕಷ್ಟು ಗೊಂದಲ ಮಾಡಿದ್ದಾರೆ. ಚುನಾವಣಾ ಪ್ರಣಾಳಿಕೆಗೆ ಕಿಂಚಿತ್ತು ಕಿಮ್ಮತ್ತಿಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸಿಎಂ ಕುಮಾರಸ್ವಾಮಿ ಅವರು ಹಸಿಸುಳ್ಳು ಹೇಳುವ ಕೆಲಸ ಮಾಡ್ತಾಯಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಾಕಷ್ಟು ಅಸಮಾಧಾನ ಇದೆ. ಹೀಗಾಗಿ ಜನಾದೇಶದ ವಿರುದ್ಧವಾದ ಈ ಮೈತ್ರಿ ಸರ್ಕಾರ ಬಹಳ ದಿನ ನಡೆಯುವದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಇನ್ನು ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆ ವಿಚಾರವಾಗಿ ಮಾತನಾಡಿದ ಅವರು, ಮಾಜಿ‌ ಪ್ರಧಾನಿ ಹೆಚ್ ಡಿ ದೇವೇಗೌಡ ಲೋಕಸಭಾ ಚುನಾವಣೆಗೆ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸುತ್ತೆ ಎಂದಿದ್ದಾರೆ. ಹೀಗಾಗಿ ಕಾಂಗ್ರೆಸ್ ಜೆಡಿಎಸ್ ನಲ್ಲಿ ನಿರಂತರವಾಗಿ ಗೊಂದಲ ಮುಂದುವರದಿದ್ದು, ಯಾವುದೇ ಸಂದರ್ಬದಲ್ಲಿ ಅಪಘಾತವಾಗಬಹುದು ಎಂದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ