ಶೀರೂರು ಮಠದಲ್ಲಿ ಸ್ಮಶಾನ ಮೌನ: ಉಡುಪಿಯಲ್ಲಿ ಮುದ್ರಾಧಾರಣೆ ಸ್ಥಗಿತ

ಉಡುಪಿ:ಶೀರೂರು ಶ್ರೀ ಅಸಹಜ ಸಾವಿನ ಹಿನ್ನಲೆಯಲ್ಲಿ ಶೀರೂರು ಮಠದಲ್ಲಿ ಮುದ್ರಾಧಾರಣೆ ಸ್ಥಗಿತಗೊಳಿಸಲಾಗಿದೆ.
ಪ್ರತಿ ವರ್ಷ ಮುದ್ರಾಧಾರಣೆಯಂದು ಶೀರೂರು ಶ್ರೀಗಳು ಭಕ್ತರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆಯನ್ನು ಕಲ್ಪಿಸುತ್ತಿದ್ದರು. ಆದರೆ ಅವರ ಸಾವಿನಿಂದಾಗಿ ಮಠದಲ್ಲಿ ಸ್ಮಶಾನ ಮೌನ ಆವರಿಸಿದೆ.
ಅಷ್ಟೇ ಅಲ್ಲದೆ, ಇನ್ನೆರಡು ದಿನಗಳಲ್ಲಿ ಶೀರೂರು ಶ್ರೀಗಳ ಮರಣೋತ್ತರ ಪರೀಕ್ಷೆಯ ತಾತ್ಕಾಲಿಕ ವರದಿ ದೊರಕಲಿದ್ದು, ವಿಧಿವಿಜ್ಞಾನ ಪ್ರಯೋಗಾಲಯದಿಂದ ವರದಿ ಬರಲಿದೆ. ಈ ಸಂಬಂಧ ತನಿಖೆ ಕೈಗೆತ್ತಿಕೊಳ್ಳಲು ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ