ಕಛೇರಿಗೆ ಬೀಗ ಜನರ ಆಕ್ರೋಶ

ಕೊಪ್ಪಳ,ಜು.23-ಅಪರ ಜಿಲ್ಲಾಧಿಕಾರಿ ರುದ್ರೇಶ್ ಘಾಳಿ ಅವರು ಕಳೆದ 20 ದಿನಗಳಿಂದ ಕಚೇರಿಗೆ ಬರದೆ ಬಾಗಿಲು ಹಾಕಿದ್ದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಹೇಬ್ರು ಕಚೆರಿಗೆ ಯಾಕೆ ಬಂದಿಲ್ಲ ಅಂತ ಕೇಳಿದರೆ ಅವರು ದೀರ್ಘರಜೆ ಮೇಲೆ ಹೋಗಿದ್ದಾರೆ ಎಂದು ಸಿಬ್ಬಂದಿ ಹೇಳುತ್ತಾರೆ. ಆದರೆ ಇನ್ನೊಂದು ಮೂಲದ ಪ್ರಕಾರ ವರ್ಗಾವಣೆ ಮಾಡಿಸಿಕೊಳ್ಳಲು ಬೆಂಗಳೂರಿನಲ್ಲಿ ಠಿಕ್ಕಾಣಿ ಹೂಡಿದ್ದಾರೆ ಎಂದು ಹೇಳಲಾಗುತ್ತಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಕೃಷ್ಣವೇಣಿ ಎಂಬುವರ ಮೇಲೆ ಅಪರ ಜಿಲ್ಲಾಧಿಕಾರಿ ಕುಟುಂಬದವರು ಹಲ್ಲೆ ಮಾಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದ್ದು, ಈ ಸಂಬಂಧ ಮುಜುಗರದಿಂದ ತಪ್ಪಿಸಿಕೊಳ್ಳಲು ರುದ್ರೇಶ್ ಗಾಳ ಬೆಂಗಳೂರಿಗೆ ಹೋಗಿದ್ದಾರೆ ಎನ್ನಲಾಗಿದೆ.
ಜನರ ಸಮಸ್ಯೆಗಳನ್ನು ಆಲಿಸಬೇಕಾದ ಅಧಿಕಾರಿಗಳೇ 20 ದಿನಗಳಿಂದ ಕಚೇರಿಗೆ ಬೀಗ ಹಾಕಿದರೆ ನಮ್ಮ ಗತಿಯೇನು ಎಂದು ಜನರು ಆಡಿಕೊಳ್ಳುವಂತಾಗಿದೆ ಎನ್ನಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ