ತಮಿಳುನಾಡು ಮಾಜಿ ಸಿಎಂ ಎಂ ಕರುಣಾ ನಿಧಿ ಶೀಘ್ರ ಗುಣಮುಖರಾಗಲಿ: ಪ್ರಧಾನಿ ಮೋದಿ

ನವದೆಹಲಿ:ಜು-೨೭: ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮಾಜಿ ಸಿಎಂ ಎಂ ಕರುಣಾ ನಿಧಿ ಶೀಘ್ರ ಗುಣಮುಖರಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಮೂತ್ರನಾಳ ಸೋಂಕು ತಗುಲಿ ಜ್ವರದಿಂದ ಬಳಲುತ್ತಿರುವ ಕರುಣಾನಿಧಿ ಅವರ ಆರೋಗ್ಯ ಆದಷ್ಟು ಬೇಗ ಸುಧಾರಿಸಲಿ ಎಂದು ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.

ಶುಕ್ರವಾರ ಬೆಳಗ್ಗೆ ಪ್ರಧಾನಿ ಟ್ವೀಟ್​ ಮಾಡಿ, ಸ್ಟಾಲಿನ್​ ಹಾಗೂ ಕನಿಮೋಳಿ ಅವರೊಂದಿಗೆ ಮಾತನಾಡಿದೆ. ಕರುಣಾನಿಧಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿ ಏನಾದರೂ ಸಹಕಾರ ಬೇಕಿದ್ದರೆ ತಿಳಿಸುವಂತೆ ಹೇಳಿದ್ದೇನೆ. ಆದಷ್ಟು ಬೇಗ ಅವರ ಆರೋಗ್ಯ ಚೇತರಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಸದ್ಯ ಕಾವೇರಿ ಆಸ್ಪತ್ರೆಯ ವೈದ್ಯರ ತಂಡ ಕರುಣಾನಿಧಿ ಅವರಿಗೆ ಪೂರ್ಣ ಪ್ರಮಾಣದ ಚಿಕಿತ್ಸೆ ನೀಡುತ್ತಿದೆ.

PM Narendra Modi wishes ailing DMK chief Karunanidhi a quick recovery

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ