ಪ್ರತ್ಯೇಕ ರಾಜ್ಯದ ಹೋರಾಟದ ಕೂಗು ಸರಿಯಲ್ಲ: ಸಚಿವ ಡಿ ಸಿ ತಮ್ಮಣ್ಣ

ಗದಗ:ಜು-೩೦:ಅಖಂಡ ಕರ್ನಾಟಕ ಏಕೀಕರಣಕ್ಕೆ ಆಲೂರು ವೆಂಕಟರಾಯರು ಅಡಿಪಾಯ ಹಾಕಿದ್ದು, ಅವರ ಆಶಯದಂತೆ ರಾಜ್ಯದ ಅಭಿವೃದ್ದಿ ಮಾಡಲಾಗುವುದು. ಉತ್ತರ ಕರ್ನಾಟಕ ಭಾಗದಲ್ಲಿ ಪ್ರತ್ಯೇಕ ರಾಜ್ಯದ ಹೋರಾಟದ ಕೂಗು ಸರಿಯಲ್ಲ ಎಂದು ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಹೇಳಿದರು.

ಗದಗದಲ್ಲಿ ಮಾತನಾಡಿದ ಅವರು, ನಾವೆಲ್ಲ ಒಂದೇ ತಾಯಿ ಮಕ್ಕಳಿದ್ದಂತೆ. ನಮ್ಮ ಸರ್ಕಾರವೂ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಆಡಿದ ಆವೇಶದ ಮಾತುಗಳನ್ನು ಪ್ರತಿ ಪಕ್ಷಗಳು ರಾಜಕೀಯಕ್ಕೆ ಬಳಸಬಾರದು. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿರುವುದನ್ನು ಶೀಘ್ರದಲ್ಲೇ ಸರಿ ಪಡಿಸಲಾಗುವುದು ಎಂದ ಅವರು, ಉತ್ತರ ಕರ್ನಾಟಕ ಗಂಡುಮೆಟ್ಟಿದ ನಾಡು. ಗೋಕಾಕ್ ಚಳುವಳಿಯ ಮೂಲಕ ಅಖಂಡ ಕರ್ನಾಟಕದ ಹೋರಾಟ ಆರಂಭವಾಯ್ತು ಎಂದರು.

ಗದಗ ನಗರದ ನೂತನ ಬಸ್ ನಿಲ್ದಾಣದಲ್ಲಿ ಗ್ರಂಥಾಲಯ ಹಾಗೂ ಶುದ್ಧನೀರಿನ ಘಟಕವನ್ನು ಉದ್ಘಾಟಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ್ರು. ರಾಜ್ಯದ ನಾಲ್ಕು ಸಾರಿಗೆ ವಿಭಾಗಗಳಲ್ಲಿ ಯಾವುದೇ ತಾರತಮ್ಯ ಇಲ್ಲ. ಆಡಳಿತದ ದೃಷ್ಠಿಯಿಂದ ಈ ಹಿಂದೆ ವಿಭಾಗಗಳನ್ನು ಮಾಡಿರುವುದು ಸರಿಯಾಗಿದೆ ಎಂದು ಸಚಿವರು ಹೇಳಿದ್ರು.

gadaga,D C Thammanna

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ