ಮನ್ಸೂನ್ ಟೂರಿಸಂ ನಿಂದ ಜಲಪಾತೋತ್ಸವ

 

ಬೆಂಗಳೂರು, ಆ.3-ರಾಜ್ಯದಲ್ಲಿ ಮಳೆಗಾಲದ ಪ್ರವಾಸೋದ್ಯಮ (ಮನ್ಸೂನ್ ಟೂರಿಸಂ)ಅಭಿವೃದ್ಧಿಪಡಿಸುವ ಸಲುವಾಗಿ ಕಾವೇರಿ ನದಿಯ ಅದ್ಭುತ ಸೃಷ್ಟಿಗಳಾದ ಮೂರು ಜಲಪಾತಗಳಲ್ಲಿ ಜಲಪಾತೋತ್ಸವವನ್ನು ಆಯೋಜಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದರು.
ಮೈಸೂರು ಜಿಲ್ಲೆ ಕೃಷ್ಣರಾಜನಗರ ತಾಲೂಕಿನ ಚುಂಚನಕಟ್ಟೆಯಲ್ಲಿ ಜಲಪಾತ ಆ.11 ಮತ್ತು 12 ರಂದು, ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ ಆ.18 ಮತ್ತು 19ರಂದು ಹಾಗೂ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಗಗನಚುಕ್ಕಿ ಜಲಪಾತಗಳಲ್ಲಿ ಆ.25 ಮತ್ತು 26 ರಂದು ಜಲಪಾತೋತ್ಸವ ಜರುಗಲಿದೆ ಎಂದು ಹೇಳಿದರು.
ಜಲಪಾತೋತ್ಸವಕ್ಕೆ ಸಹಸ್ರಾರು ಮಂದಿ ಆಗಮಿಸುವ ಸಾಧ್ಯತೆ ಇದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಡಾ.ಜಿ.ಪರಮೇಶ್ವರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ