ಬೀಗ ಮುರಿದು ನಗದು, ಚಿನ್ನಾಭರಣ ಹಾಗೂ ಮನೆಯ ಮುಂದೆ ನಿಲ್ಲಿಸಿದ್ದ ಫೆÇೀರ್ಡ್ ಕಾರು ಕಳವು ಮಾಡಿ ಪರಾರಿ

 

ಬೆಂಗಳೂರು, ಆ.4-ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮುಂಬಾಗಿಲ ಬೀಗ ಮುರಿದು ನಗದು, ಚಿನ್ನಾಭರಣ ಹಾಗೂ ಮನೆಯ ಮುಂದೆ ನಿಲ್ಲಿಸಿದ್ದ ಫೆÇೀರ್ಡ್ ಕಾರು ಕಳವು ಮಾಡಿರುವ ಘಟನೆ ಹನುಮಂತನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಎಸ್‍ಕೆ ಮೊದಲನೇ ಹಂತ 5ನೆ ಮೈನ್, 1ನೆ ಕ್ರಾಸ್ ನಿವಾಸಿ ರಾಘವೇಂದ್ರ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ರಾಘವೇಂದ್ರ ಅವರು ಎರಡು ದಿನಗಳ ಹಿಂದೆ ಮನೆಗೆ ಬೀಗ ಹಾಕಿ ಸ್ವಂತ ಊರಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ತಮ್ಮ ಸಂಬಂಧಿ ಅರವಿಂದ ಅವರಿಗೆ ವಿಷಯ ತಿಳಿಸಿ, ಮನೆಯ ಕಡೆ ಗಮನ ಹರಿಸುವಂತೆ ಹೇಳಿದ್ದರು.
ಅದರಂತೆ ಅರವಿಂದ್ ಅವರು ನಿನ್ನೆ ಮನೆಗೆ ಬಂದು ನೋಡಿದಾಗ ಮನೆಯ ಬೀಗ ಮುರಿದಿರುವುದು ಕಂಡುಬಂದಿದೆ. ತಕ್ಷಣ ಅವರು ಮನೆಯ ಮಾಲೀಕ ರಾಘವೇಂದ್ರ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮಾತ್ರವಲ್ಲ ಪೆÇಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ.
ರಾಘವೇಂದ್ರ ಅವರು ಊರಿನಿಂದ ಬಂದ ಬಳಿಕ ಮನೆಯಲ್ಲಿ ಏನೆಲ್ಲಾ ವಸ್ತುಗಳು ಕಳವಾಗಿವೆ ಎಂಬುದರ ಬಗ್ಗೆ ನಿಖರ ಮಾಹಿತಿ ಸಿಗಲಿದೆ. ಮನೆಯ ಮುಂಭಾಗ ನಿಲ್ಲಿಸಿದ್ದ ಫೆÇೀರ್ಡ್ ಪಿಗೊ ಕಾರನ್ನು ಕೂಡ ಕಳ್ಳರು ಕೊಂಡೊಯ್ದಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಹನುಮಂತನಗರ ಪೆÇಲೀಸರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ