ಬೇಡ-ಜಂಗಮ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆ ಬೃಹತ್ ಸಮಾವೇಶ

Varta Mitra News

 

ಬೆಂಗಳೂರು,ಆ.4- ವೀರಶೈವ ಪಂಥದಲ್ಲಿ ಬರುವ ಬೇಡ-ಜಂಗಮ ಜಾತಿ ಪ್ರಮಾಣ ಪತ್ರ ವಿತರಿಸುವಾಗ ಉಚ್ಛ ನ್ಯಾಯಾಲಯ ಹಾಗೂ ಸರ್ವೋಚ್ಛ ನ್ಯಾಯಾಲಯಗಳ ಆದೇಶವನ್ನು ಪಾಲಿಸಬೇಕೆಂದು ಒತ್ತಾಯಿಸಿ ಆ.10ರಂದು ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿರುವುದಾಗಿ ಅಂಬೇಡ್ಕರ್ ಬೇಡ-ಜಂಗಮ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಡಾ.ಎಂ.ಪಿ.ತಾರಕೇಶ್ವರಯ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರಶೈವ ಬೇಡ-ಜಂಗಮ ಪ್ರಮಾಣ ಪತ್ರ ವಿತರಿಸುವಲ್ಲಿ ಸಾಕಷ್ಟು ಲೋಪದೋಷಗಳು ಉಂಟಾಗುತ್ತಿವೆ. ಬೈರಾಗಿ ಜಂಗಮ, ವೀರಶೈವ, ಬುಡುಗ ಜಂಗಮ ಜಾತಿಗಳ ವ್ಯತ್ಯಾಸ ತಿಳಿಯದೆ ಕೆಲ ಅಧಿಕಾರಿಗಳು ಜಾತಿ ಪ್ರಮಾಣ ಪತ್ರ ವಿತರಿಸುತ್ತಿರುವುದರಿಂದ ನಿಜವಾದ ಬೇಡ ಜಂಗಮ ಜಾತಿಯವರಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ