ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ: 2 ದಿನಗಳಲ್ಲಿ ಡಿಸ್ಚಾರ್ಜ್

ಚೆನ್ನೈ:ಆ-೫: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇನ್ನೆರಡು ಮೂರು ದಿನಗಳಲ್ಲಿ ಮನೆಗೆ ವಾಪಸ್ ಆಗಲಿದ್ದಾರೆ ಎಂದು ಡಿಎಂಕೆ ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೈಮುರುಗನ್‌ ಅವರು, ‘ಕರುಣಾನಿಧಿ ಅವರು ಚೇತರಿಸಿಕೊಂಡಿಗಿದ್ದು, ಇನ್ನು ಎರಡು ಅಥವಾ ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಲಿದ್ದಾರೆ ಎಂದು ತಿಳಿಸಿದ್ದಾರೆ.

ಕಳೆದ ವಾರಕ್ಕೆ ಹೋಲಿಸಿದರೆ ಕರುಣಾನಿಧಿ ಅವರ ಆರೋಗ್ಯದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ. ನಾವು ಹೇಳುವುದನ್ನು ಕೇಳಿಸಿಕೊಳ್ಳುವಷ್ಟು ಸಮರ್ಥರಾಗಿದ್ದಾರೆ. ಅವರು ತಮ್ಮ ಸಂಕಷ್ಟದ ದಿನಗಳನ್ನು ಜಯಿಸಿದ್ದಾರೆ. ಆರೋಗ್ಯದ ಏರಿಳಿತಗಳಲ್ಲಿ ಚೇತರಿಕೆಯಾಗಿದೆ. ಇನ್ನು ಎರಡು ಅಥವಾ ಮೂರು ದಿನಗಳಲ್ಲಿ ಮನೆಗೆ ಮರಳಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಅನಾರೋಗ್ಯದ ನಿಮಿತ್ತ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿರುವ ಕರುಣಾನಿಧಿ ಅವರ ಆರೋಗ್ಯ ವಿಚಾರಿಸಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಚೆನ್ನೈಗೆ ಆಗಮಿಸಲಿದ್ದಾರೆ.

DMK,M Karunanidhi,Kauveri Hospital

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ