ನೆಣು ಬಿಗಿದುಕೊಂಡು ಮಹಿಳೆ ಅತ್ಮಹತ್ಯೆ

 

 

ಬೆಂಗಳೂರು, ಆ.5- ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆಆರ್ ಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಟಿಸಿ ಪಾಳ್ಯದ ರಂಗಪ್ಪ ಲೇಔಟ್, 2ನೆ ಕ್ರಾಸ್ ನಿವಾಸಿ ಮೇರಿಯಮ್ಮ (40) ಆತ್ಮಹತ್ಯೆಗೆ ಶರಣಾದ ಮಹಿಳೆ.
ನಿನ್ನೆ ಸಂಜೆ ಮೇರಿಯಮ್ಮ ಅವರಿಗೆ ಸಹೋದರಿ ಅಮೃತ ಎಂಬುವವರು ಹಲವು ಬಾರಿ ಮೊಬೈಲ್‍ಗೆ ಕರೆ ಮಾಡಿದ್ದಾರೆ.
ಕರೆ ಸ್ವೀಕರಿಸದ ಕಾರಣ ಅನುಮಾನಗೊಂಡ ಅಮೃತ ಮನೆ ಬಳಿ ಬಂದು ಬಾಗಿಲು ತಟ್ಟಿದಾಗ ತೆರೆದಿಲ್ಲ.
ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದ್ದರಿಂದ ಸಂಶಯದಿಂದ ಬಾಗಿಲು ಒಡೆದು ನೋಡಿದಾಗ ಮೇರಿಯಮ್ಮ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಕೆಆರ್ ಪುರ ಠಾಣೆ ಪೆÇಲೀಸರು ಪರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ